ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

Published : Apr 18, 2023, 01:22 PM IST

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ.

ಬೆಂಗಳೂರು (ಏ.18):  ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ ಅವರು ತಮ್ಮ ಮಾನಸ ಪುತ್ರ ಮಹೇಶ ತೆಂಗಿನಕಾಯಿಗೆ ಟಿಕೆಟ್ ನೀಡುವ ಸಲುವಾಗಿ ಪಕ್ಷವನ್ನು ಕಟ್ಟಿ ಬೆಳೆಸಿದರನ್ನ ಹೊರ ಹೋಗುವ ಪರಿಸ್ಥಿತಿಯನ್ನು ಪಕ್ಷದಲ್ಲಿ ಸೃಷ್ಟಿಸಲಾಗುತ್ತಿದೆ. ಈ ಹಿಂದೆ ಸಂತೋಷ ಅವರು ಪ್ರಚಾರ ಮಾಡಿದ, ಉಸ್ತುವಾರಿ ವಹಿಸಿಕೊಂಡ ರಾಜ್ಯಗಳು ಸೋತಿವೆ. ಆದರೂ ವರಿಷ್ಠರು ಈ ವಿಧಾನಸಭಾ ಚುನಾವಣೆಯಲ್ಲಿ ‌ರಾಜ್ಯದ ಉಸ್ತುವಾರಿ‌ ಏಕೆ ನೀಡಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ.  ಟಿಕೆಟ್ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ‌  ಬೊಮ್ಮಾಯಿ ಗಟ್ಟಿ‌ಯಾದ ನಿಲುವು ತಾಳಲಿಲ್ಲ. ಬಾಯಿ ಮಾತಲ್ಲ ವರಷ್ಠರೊಂದಿಗೆ ಮಾತನಾಡಿದ್ದೇನೆ ಅಂತ ಹೇಳಿದರು. ಧರ್ಮೆಂದ್ರ ಪ್ರಧಾನ್ ಅವರು ಕರೆ ಮಾಡಿ ಕ್ಷೇತ್ರದಲ್ಲಿ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ. ಕೂಡಲೆ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಕಳಿಸಿ ಅಂತಾ ಹೇಳುತ್ತಾರೆ. ಸೌಜನ್ಯಕ್ಕಾದರೂ ನನಗೆ ಯಾವ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿಲ್ಲ ಅನ್ನುವುದನ್ನ ಹೇಳಲಿಲ್ಲ. ಸಂತೋಷ ಅವರು ಅವರ ಮಾನಸಪುತ್ರನಿಗೆ ನೀಡಿದ ಪ್ರೀತಿಯಲ್ಲಿ ನನಗೆ 1% ನೀಡಿದ್ದರೆ ಈ ಬೆಳವಣಿಗಳು ಆಗುತ್ತಿರಲಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಟನಾಗಿ ಅವರು ನೀಡುವ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಏಳ್ಗೆಗೆ ಶ್ರಮಿಸುವುದಾಗಿ ಶೆಟ್ಟರ್ ಹೇಳಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more