ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

Published : Apr 18, 2023, 01:22 PM IST

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ.

ಬೆಂಗಳೂರು (ಏ.18):  ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ ಅವರು ತಮ್ಮ ಮಾನಸ ಪುತ್ರ ಮಹೇಶ ತೆಂಗಿನಕಾಯಿಗೆ ಟಿಕೆಟ್ ನೀಡುವ ಸಲುವಾಗಿ ಪಕ್ಷವನ್ನು ಕಟ್ಟಿ ಬೆಳೆಸಿದರನ್ನ ಹೊರ ಹೋಗುವ ಪರಿಸ್ಥಿತಿಯನ್ನು ಪಕ್ಷದಲ್ಲಿ ಸೃಷ್ಟಿಸಲಾಗುತ್ತಿದೆ. ಈ ಹಿಂದೆ ಸಂತೋಷ ಅವರು ಪ್ರಚಾರ ಮಾಡಿದ, ಉಸ್ತುವಾರಿ ವಹಿಸಿಕೊಂಡ ರಾಜ್ಯಗಳು ಸೋತಿವೆ. ಆದರೂ ವರಿಷ್ಠರು ಈ ವಿಧಾನಸಭಾ ಚುನಾವಣೆಯಲ್ಲಿ ‌ರಾಜ್ಯದ ಉಸ್ತುವಾರಿ‌ ಏಕೆ ನೀಡಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ.  ಟಿಕೆಟ್ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ‌  ಬೊಮ್ಮಾಯಿ ಗಟ್ಟಿ‌ಯಾದ ನಿಲುವು ತಾಳಲಿಲ್ಲ. ಬಾಯಿ ಮಾತಲ್ಲ ವರಷ್ಠರೊಂದಿಗೆ ಮಾತನಾಡಿದ್ದೇನೆ ಅಂತ ಹೇಳಿದರು. ಧರ್ಮೆಂದ್ರ ಪ್ರಧಾನ್ ಅವರು ಕರೆ ಮಾಡಿ ಕ್ಷೇತ್ರದಲ್ಲಿ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ. ಕೂಡಲೆ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಕಳಿಸಿ ಅಂತಾ ಹೇಳುತ್ತಾರೆ. ಸೌಜನ್ಯಕ್ಕಾದರೂ ನನಗೆ ಯಾವ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿಲ್ಲ ಅನ್ನುವುದನ್ನ ಹೇಳಲಿಲ್ಲ. ಸಂತೋಷ ಅವರು ಅವರ ಮಾನಸಪುತ್ರನಿಗೆ ನೀಡಿದ ಪ್ರೀತಿಯಲ್ಲಿ ನನಗೆ 1% ನೀಡಿದ್ದರೆ ಈ ಬೆಳವಣಿಗಳು ಆಗುತ್ತಿರಲಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಟನಾಗಿ ಅವರು ನೀಡುವ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಏಳ್ಗೆಗೆ ಶ್ರಮಿಸುವುದಾಗಿ ಶೆಟ್ಟರ್ ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more