ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ನೇರ ಕಾರಣ, ಶೆಟ್ಟರ್ ಗಂಭೀರ ಆರೋಪ!

Published : Apr 18, 2023, 01:22 PM IST

ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ.

ಬೆಂಗಳೂರು (ಏ.18):  ಬಿಜೆಪಿಯಲ್ಲಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ ಅವರೇ ನೇರ ಕಾರಣ ಎಂದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ‌ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ ಅವರು ತಮ್ಮ ಮಾನಸ ಪುತ್ರ ಮಹೇಶ ತೆಂಗಿನಕಾಯಿಗೆ ಟಿಕೆಟ್ ನೀಡುವ ಸಲುವಾಗಿ ಪಕ್ಷವನ್ನು ಕಟ್ಟಿ ಬೆಳೆಸಿದರನ್ನ ಹೊರ ಹೋಗುವ ಪರಿಸ್ಥಿತಿಯನ್ನು ಪಕ್ಷದಲ್ಲಿ ಸೃಷ್ಟಿಸಲಾಗುತ್ತಿದೆ. ಈ ಹಿಂದೆ ಸಂತೋಷ ಅವರು ಪ್ರಚಾರ ಮಾಡಿದ, ಉಸ್ತುವಾರಿ ವಹಿಸಿಕೊಂಡ ರಾಜ್ಯಗಳು ಸೋತಿವೆ. ಆದರೂ ವರಿಷ್ಠರು ಈ ವಿಧಾನಸಭಾ ಚುನಾವಣೆಯಲ್ಲಿ ‌ರಾಜ್ಯದ ಉಸ್ತುವಾರಿ‌ ಏಕೆ ನೀಡಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ.  ಟಿಕೆಟ್ ವಿಷಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ‌  ಬೊಮ್ಮಾಯಿ ಗಟ್ಟಿ‌ಯಾದ ನಿಲುವು ತಾಳಲಿಲ್ಲ. ಬಾಯಿ ಮಾತಲ್ಲ ವರಷ್ಠರೊಂದಿಗೆ ಮಾತನಾಡಿದ್ದೇನೆ ಅಂತ ಹೇಳಿದರು. ಧರ್ಮೆಂದ್ರ ಪ್ರಧಾನ್ ಅವರು ಕರೆ ಮಾಡಿ ಕ್ಷೇತ್ರದಲ್ಲಿ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ. ಕೂಡಲೆ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಕಳಿಸಿ ಅಂತಾ ಹೇಳುತ್ತಾರೆ. ಸೌಜನ್ಯಕ್ಕಾದರೂ ನನಗೆ ಯಾವ ಕಾರಣಕ್ಕೆ ಟಿಕೆಟ್ ನೀಡಲಾಗುತ್ತಿಲ್ಲ ಅನ್ನುವುದನ್ನ ಹೇಳಲಿಲ್ಲ. ಸಂತೋಷ ಅವರು ಅವರ ಮಾನಸಪುತ್ರನಿಗೆ ನೀಡಿದ ಪ್ರೀತಿಯಲ್ಲಿ ನನಗೆ 1% ನೀಡಿದ್ದರೆ ಈ ಬೆಳವಣಿಗಳು ಆಗುತ್ತಿರಲಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಟನಾಗಿ ಅವರು ನೀಡುವ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಏಳ್ಗೆಗೆ ಶ್ರಮಿಸುವುದಾಗಿ ಶೆಟ್ಟರ್ ಹೇಳಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more