ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : May 09, 2023, 05:01 PM ISTUpdated : May 09, 2023, 05:07 PM IST

ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ ಪ್ರಯೋಗ.
ಮಾಲೂರು ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್
ಮಾಟ ಮಂತ್ರ ಪ್ರಯೋಗದ ಸಿಸಿಟಿವಿ ದೃಶ್ಯ ಲಭ್ಯ

ಕೋಲಾರ: ಚುನಾವಣೆಗೆ ಒಂದು ದಿನ ಬಾಕಿ ಇರುವಾಗಲೇ, ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಲೂರು ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್ ಅವರ ವೈಟ್ ಗಾರ್ಡನ್‌ನಲ್ಲಿರುವ ನಿವಾಸದಲ್ಲಿ ಮಾಟ ಮಂತ್ರ ಮಾಡಲಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಳು ಮಾಟ ಮಂತ್ರ ಮಾಡಿಸಿರುವ ಅನುಮಾನ ವ್ಯಕ್ತವಾಗಿದೆ. ಮನೆಯ ಕಾಂಪೌಂಡ್, ಮೇಲ್ಚಾವಣಿ ಹಾಗೂ ರಸ್ತೆಯಲ್ಲಿ ಮಾಟ ಮಂತ್ರದ ಕುರುಹುಗಳು ಪತ್ತೆಯಾಗಿವೆ. ಮೂರು ಕಡೆಗಳಲ್ಲಿ ಪ್ರತ್ಯೇಕವಾಗಿ ಮಾಟ ಮಂತ್ರವನ್ನು ಕಿಡಿಗೇಡಿಗಳು ಮಾಡಿಸಿದ್ದಾರೆ. ಎರಡು ಕಡೆಗಳಲ್ಲಿ ಬೊಂಬೆ,ನಿಂಬೆಹಣ್ಣು ಹಾಗೂ ಅರಿಶಿಣ, ಕುಂಕುಮ ಪತ್ತೆಯಾಗಿದೆ. ಮತ್ತೊಂದು ಕಡೆ ಮೂರು ಬ್ಯಾಗ್‌ಗಳಲ್ಲಿ ಮಾಟ ಮಂತ್ರದ ವಸ್ತುಗಳನ್ನು ಪತ್ತೆಯಾಗಿವೆ. ಮಾಟ ಮಂತ್ರ ಪ್ರಯೋಗದ ಸಿಡಿಟಿವಿ ದೃಶ್ಯ ಲಭ್ಯವಾಗಿದ್ದು, ಮಧ್ಯರಾತ್ರಿ 12 ಗಂಟೆಗೆ ಬಂದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ.ವ್ಯಕ್ತಿ ತಲೆಯ ಮೇಲೆ ಟವಲ್ ಹಾಕಿಕೊಂಡು ಮುಖವನ್ನು ಮುಚ್ಚಿಕೊಂಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದಿದ್ದ ರಮ್ಯಾ: ಈ ಬಾರಿ ಮತ ಹಾಕ್ತಾರಾ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more