ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ನಿಮ್ಮ ಶ್ರಮ ಬೇಕು: ಬಿಎಸ್‌ವೈಗೆ ಹೇಳಿದ ಮೋದಿ

Published : Aug 17, 2022, 06:17 PM IST

ಕೇಂದ್ರ ಸಂಸದೀಯ ಮಂಡಳಿಯಲ್ಲಿ ತಮಗೆ ಸ್ಥಾನ ನೀಡಿರುವ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿ ಬಿ ಎಸ್‌ ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ
 

ಬೆಂಗಳೂರು (ಆ. 17): ಭಾರತೀಯ ಜನತಾ ಪಕ್ಷದ ಅತ್ಯಂತ ಮಹತ್ವದ ಮಂಡಳಿಯಾಗಿರುವ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲಿಯೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ದಕ್ಷಿಣ ಭಾರತದ ಪ್ರಭಾವಿ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬಲಪಡಿಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮ ಬಹಳ ಅಗತ್ಯವಾಗಿದೆ ಎಂದು ಮೋದಿ ಈ ವೇಳೆ ಹೇಳಿದ್ದಾರೆ. ಅದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರವನ್ನು ಪಕ್ಷ ನೀಡಲಿದೆ ಎಂದೂ ಹೇಳಿದ್ದಾರೆ.

ಬಿಜೆಪಿಯ ಸಂಸದೀಯ ಸಮಿತಿಗೆ ಇರುವ ಪವರ್‌ ಏನು? ಇಲ್ಲಿದೆ ಡೀಟೇಲ್ಸ್‌!

ಇದು ಬಿಎಸ್‌ವೈಗೆ ಸಿಕ್ಕ ಅತೀದೊಡ್ಡ ಜವಾಬ್ದಾರಿಯಾಗಿದೆ. ಸಂಸದೀಯ ಮಂಡಳಿಯೊಂದಿಗೆ ಚುನಾವಣಾ ಸಮಿತಿಯಲ್ಲೂ ಯಡಿಯೂರಪ್ಪ ಸ್ಥಾನ ಪಡೆದಿದ್ದಾರೆ. ಎಲ್ಲಾ ನಿಟ್ಟಿನಲ್ಲೂ ಈ ವಿಚಾರದಲ್ಲಿ ಕೆಲಸ ಮಾಡಿ ಎಂದು ನರೇಂದ್ರ ಮೋದಿ ಅವರು ಬಿಎಸ್‌ವೈಗೆ ಹೇಳಿದ್ದಾರೆ ಎನ್ನಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more