ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ರಾಜಾಹುಲಿ ಘರ್ಜನೆ!

ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ರಾಜಾಹುಲಿ ಘರ್ಜನೆ!

Published : Mar 25, 2023, 04:45 PM ISTUpdated : Mar 25, 2023, 05:04 PM IST

ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ.

ದಾವಣಗೆರೆ (ಮಾ.25): ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಾವಣೆಗೆರೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾರ್ಯಕರ್ತರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲೇ ಯಡಿಯೂರಪ್ಪ, ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದ್ದಾರೆ. ನನಗೆ 80 ವರ್ಷ ವಯಸ್ಸು. ಆದರೆ ವಿಶ್ರಾಂತಿ ಪಡೆಯಲ್ಲ. ನಾನು ಮನೆ ಮನೆಗೆ ತೆರಳಿ ಬಿಜೆಪಿ ಗೆಲ್ಲಿಸುವ ಕೆಲಸ ಮಾಡುತ್ತೇನೆ. ನನಗೆ ನಿಮ್ಮ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಒಂದು ಕಾಲವಿತ್ತು,  ಅಧಿಕಾರದ ಬಲ, ಹಣದ ಬಲ, ಹೆಂಡದ ಬಲದಿಂದ ಅಧಿಕಾರಕ್ಕೆ ಬರುವ ಕಾಲವಿತ್ತು. ಆದರೆ ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ದಿ ಆಡಳಿತವನ್ನು ಮೆಚ್ಚಿಕೊಂಡಿದೆ. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಆಡಳಿತ ಅಭಿವೃದ್ಧಿಯನ್ನು ತಲುಪಿಸಿ. ಈ ಮೂಲಕ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬರಲು ನೀವೆಲ್ಲ ಕೈಜೋಡಿಸಬೇಕು. ಇದು ಕೇವಲ ವಿಜಯ ಸಂಕಲ್ಪ ಯಾತ್ರೆ ಮಾತ್ರವಲ್ಲ, ವಿಜಯ ಯಾತ್ರೆಯಾಗಿದೆ. ಕಾಂಗ್ರೆಸ್ ಈಗಾಗಲೇ ಸೋಲೊಪ್ಪಿಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಯಡಿಯೂರಪ್ಪ ಹೇಳಿದರು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more