ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ರಾಜಾಹುಲಿ ಘರ್ಜನೆ!

ವಿಜಯ ಸಂಕಲ್ಪ ಸಮಾರೋಪ ಸಮಾವೇಶದಲ್ಲಿ ರಾಜಾಹುಲಿ ಘರ್ಜನೆ!

Published : Mar 25, 2023, 04:45 PM ISTUpdated : Mar 25, 2023, 05:04 PM IST

ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ.

ದಾವಣಗೆರೆ (ಮಾ.25): ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಾವಣೆಗೆರೆಯಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಕಾರ್ಯಕರ್ತರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲೇ ಯಡಿಯೂರಪ್ಪ, ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ನೀಡಿದ್ದಾರೆ. ನನಗೆ 80 ವರ್ಷ ವಯಸ್ಸು. ಆದರೆ ವಿಶ್ರಾಂತಿ ಪಡೆಯಲ್ಲ. ನಾನು ಮನೆ ಮನೆಗೆ ತೆರಳಿ ಬಿಜೆಪಿ ಗೆಲ್ಲಿಸುವ ಕೆಲಸ ಮಾಡುತ್ತೇನೆ. ನನಗೆ ನಿಮ್ಮ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಒಂದು ಕಾಲವಿತ್ತು,  ಅಧಿಕಾರದ ಬಲ, ಹಣದ ಬಲ, ಹೆಂಡದ ಬಲದಿಂದ ಅಧಿಕಾರಕ್ಕೆ ಬರುವ ಕಾಲವಿತ್ತು. ಆದರೆ ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ದಿ ಆಡಳಿತವನ್ನು ಮೆಚ್ಚಿಕೊಂಡಿದೆ. ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಆಡಳಿತ ಅಭಿವೃದ್ಧಿಯನ್ನು ತಲುಪಿಸಿ. ಈ ಮೂಲಕ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬರಲು ನೀವೆಲ್ಲ ಕೈಜೋಡಿಸಬೇಕು. ಇದು ಕೇವಲ ವಿಜಯ ಸಂಕಲ್ಪ ಯಾತ್ರೆ ಮಾತ್ರವಲ್ಲ, ವಿಜಯ ಯಾತ್ರೆಯಾಗಿದೆ. ಕಾಂಗ್ರೆಸ್ ಈಗಾಗಲೇ ಸೋಲೊಪ್ಪಿಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ಗ್ಯಾರೆಂಟ್ ಕಾರ್ಡ್ ನೀಡುತ್ತಿದೆ. 70 ವರ್ಷ ಕಾಂಗ್ರೆಸ್ ಕಡುಬು ತಿಂತಾ ಇದ್ದೀರಾ. ಸುಳ್ಳು ಭರವಸೆಯನ್ನು ನೀಡಿ ಕಾಂಗ್ರೆಸ್ ಜನರನ್ನು ಮೋಸ ಮಾಡುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದು ಯಡಿಯೂರಪ್ಪ ಹೇಳಿದರು.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more