11ನೇ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ..! ಕೇಸರಿ ಸೈನ್ಯವನ್ನ ಮುನ್ನಡೆಸಿದ ನಾಯಕರು ಇವರು..!

11ನೇ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ..! ಕೇಸರಿ ಸೈನ್ಯವನ್ನ ಮುನ್ನಡೆಸಿದ ನಾಯಕರು ಇವರು..!

Published : Nov 16, 2023, 02:48 PM IST

ಎರಡನೇ ಅಧ್ಯಕ್ಷರಾಗಿ ಬಿ.ಬಿ. ಶಿವಪ್ಪ ಆಯ್ಕೆ
1983-1988 ಒಟ್ಟೂ 5 ವರ್ಷ ಅಧ್ಯಕ್ಷ ಗಾದಿ..!
ಮನೆ ಮಾರಿ ಪಕ್ಷ ಸಂಘಟನೆ ಮಾಡಿದ್ದ ನಾಯಕ

ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ವಿಜಯೇಂದ್ರ(BY vijayendra) ಅವರು ಕರ್ನಾಟಕ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿದ್ದಾರೆ. 1980ರಲ್ಲಿ ಎ.ಕೆ. ಸುಬ್ಬಯ್ಯ ಅವರು ಕರ್ನಾಟಕ(Karnataka) ಬಿಜೆಪಿಯ(BJP) ಮೊದಲ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಮೂರು ವರ್ಷಗಳ ಕಾಲ ಅಂದ್ರೆ 1983 ತನಕ ರಾಜ್ಯಾಧ್ಯಕ್ಷರಾಗಿ(State president) ಕಾರ್ಯ ನಿರ್ವಹಿಸಿದ್ರು. ಒಟ್ಟೂ ನೂರಾಹತ್ತು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 18 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಆ ವರ್ಷ ಅಭೂತಪೂರ್ವ ಸಾಧನೆ ಮಾಡಿದ್ದು ಜನತಾ ಪಾರ್ಟಿ. ಈಗ ಅನೇಕ ಹೋಳಾಗಿರುವ ಪಕ್ಷ 95 ಕ್ಷೇತ್ರಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಸುಬ್ಬಯ್ಯನವರು ನೇರ ನುಡಿಗೆ ಖ್ಯಾತಿಯನ್ನ ಹೊಂದಿದ್ದವರು. ಕ್ರಮೇಣ ಸಂಘ ಪರಿವಾರದ ವಿರುದ್ಧವೇ ಮಾತನ್ನಾಡೋಕೆ ಶುರು ಮಾಡಿದ್ರು. ಕರ್ನಾಟಕದ ಬಿಜೆಪಿ ಇತಿಹಾಸಕ್ಕೆ ಮೆರಗು ಮತ್ತು ಶೋಭೆ ತಂದು ಕೊಟ್ಟವರು ಬಿ.ಬಿ.ಶಿವಪ್ಪ. ಅವರು ಪಕ್ಷದಿಂದ ಏನೂ ಬಯಸಿದವರಲ್ಲ. ಪಕ್ಷ ಸಂಘಟನೆಗಾಗಿ ಮನೆ ಮಾರಿಕೊಂಡರಲ್ಲದೇ ತನು, ಮನ, ಧನವನ್ನು ಸಮರ್ಪಣೆ ಮಾಡಿದ ಸಜ್ಜನ ರಾಜಕಾರಣಿ. ಪಕ್ಷದ ವರಿಷ್ಠ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಆಗ ಕರ್ನಾಟಕಕ್ಕೆ ಬಂದರೆ ಉಳಿದುಕೊಳ್ಳುತ್ತಿದ್ದು, ಬೆಂಗಳೂರಿನ ಶಾಂತಿನಗರದಲ್ಲಿದ್ದ ಶಿವಪ್ಪನವರ ಮನೆಯಲ್ಲೇ. ಕೇವಲ ಡೆಲ್ಲಿ ಮುಖಂಡರಷ್ಟೇ ಅಲ್ಲ, ಉತ್ತರ, ದಕ್ಷಿಣ ಕರ್ನಾಟಕ ರಾಜಕಾರಣಿಗಳಲ್ಲೇ ಬರುತ್ತಿದ್ದದ್ದು ಶಿವಪ್ಪನವರ ಈ ಮನೆಗೆ. ಬಿಜೆಪಿಯ ಸಂಘಟನೆಯ ನೆಲೆಯಾಗಿದ್ದ ಶಾಂತಿನಗರದ ಮನೆಯನ್ನು ಶಿವಪ್ಪನವರು ಪಕ್ಷ ಸಂಘಟನೆಗಾಗಿ  ಮಾರಿ ಬಿಟ್ಟರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ರಾಜ್ಯವನ್ನು ಸುತ್ತಾಡಿದ ಶಿವಪ್ಪನವರು ರಾಜಕೀಯದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವಳಿಗಾಗಿ ಬಂದವನು 4 ಹೆಣಗಳನ್ನ ಉರುಳಿಸಿದ್ದ..! ಎಸ್ಕೇಪ್ ಆಗಿದ್ದವನು ತಗ್ಲಾಕಿಕೊಂಡಿದ್ದೇಗೆ..?

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more