ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

Published : Nov 13, 2023, 02:03 PM ISTUpdated : Nov 13, 2023, 02:04 PM IST

ಲೋಕ ಗೆಲ್ಲೋಕೆ ಮೋದಿ ವಿಜಯಾಸ್ತ್ರ ಪ್ರಯೋಗ!
10 ರಿಂದ 12 ಕ್ಷೇತ್ರಗಳಲ್ಲಿ ಟಿಕೆಟ್ ಬದಲಾವಣೆ..!
ಆಂತರಿಕ ಸಮಸ್ಯೆಗಳ ಮೆಟ್ಟಿ ನಿಲ್ಲುವ ಸವಾಲು..!

ಕರ್ನಾಟಕ ವಿಧಾನಸಭಾ ಚುನಾವಣೆಯ ಹೀನಾಯ ಸೋಲು ಬಿಜೆಪಿ(BJP) ಪಾಲಿಗೆ ನಿಜಕ್ಕೂ ಆಘಾತ ನೀಡಿತ್ತು. ಈ ಸೋಲಿನ ಬಳಿಕ ಕಂಗೆಟ್ಟು ಕೂತಿದ್ದ ರಾಜ್ಯ ಬಿಜೆಪಿಗೆ ಈಗ ಹೊಸ ಸಾರಥಿಯ ಘೋಷಣೆಯಾಗಿದೆ. ಶಿಕಾರಿವೀರನ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ(B.Y.Vijayendra) ಅವರಿಗೆ ಕರ್ನಾಟಕ ಕಮಲ ಪಡೆಯ ಸೇನಾಧಿಪತ್ಯ ದಕ್ಕಿದೆ. ಈ ಕ್ಷಣದಿಂದಲೇ ರಾಜ್ಯ ರಾಜಕಾರಣದ ದಿಕ್ಕುದೆಸೆ ಬದಲಾಗೋ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಗಿದಾಗಿನಿಂದಲೂ,  ಕರ್ನಾಟಕದ(Karnataka) ಕೇಸರಿ ಕೋಟೆಯಲ್ಲಿ ಸದ್ದು ಮಾಡ್ತಿದ್ದದ್ದು ಎರಡೇ ಪ್ರಶ್ನೆ. ಮೊದಲನೇದು, ಬಿಜೆಪಿ ರಾಜ್ಯಾಧ್ಯಕ್ಷ ಯಾರು ಅನ್ನೋದು. ಇನ್ನೊಂದು ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಅನ್ನೋದು. ಆದ್ರೆ ಈ ಪೈಕಿ ಮೊದಲನೇ ಪ್ರಶ್ನೆಗೆ, ಬಿಜೆಪಿ ಹೈಕಮಾಂಡ್ ಕಡೆಗೂ ಉತ್ತರ ಕೊಟ್ಟಿದೆ. ಲೋಕಸಭಾ ಚುನಾವಣೆಯ(Loksabha) ಹೊಸ್ತಿಲಲ್ಲೇ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.ಅಧ್ಯಕ್ಷ ಪಟ್ಟಕ್ಕೋಸ್ಕರ ಪಟ್ಟು ಹಿಡಿದಿದ್ದ ಹಲವರನ್ನ ಓವರ್ ಟೇಕ್ ಮಾಡಿ, ಕೆಲವರನ್ನ ಸೈಡಿಗೆ ತಳ್ಳಿ ಅಂತೂ, ಮಗನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನನ್ನಾಗಿ ಮಾಡುವಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ. ಆದ್ರೆ ವಿಜಯೇಂದ್ರ ಹಾದಿ ಅಂದುಕೊಂಡಷ್ಟು ಸುಲಭವಿಲ್ಲ. ಯಾಕೆಂದ್ರೆ ಕಾಂಗ್ರೆಸ್ ಮಣಿಸೋದು ನೇರ ಸವಾಲಾಗಿದ್ರೂ ಕೂಡ ಆಂತರಿಕ ಭಿನ್ನಾಭಿಪ್ರಾಯವನ್ನ ಸರಿದೂಗಿಸಿಕೊಂಡು ಹೋಗೋದು ಅತಿ ಮುಖ್ಯ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು ಇವೆ. 

ಇದನ್ನೂ ವೀಕ್ಷಿಸಿ:  ಹುಟ್ಟು ಹಬ್ಬದಂದು ಭೈರಾದೇವಿ ಟೀಸರ್ ರಿಲೀಸ್..! ಲುಕ್ ನೋಡಿ ಫ್ಯಾನ್ಸ್ ಶಾಕ್..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more