ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

Published : Nov 13, 2023, 02:03 PM ISTUpdated : Nov 13, 2023, 02:04 PM IST

ಲೋಕ ಗೆಲ್ಲೋಕೆ ಮೋದಿ ವಿಜಯಾಸ್ತ್ರ ಪ್ರಯೋಗ!
10 ರಿಂದ 12 ಕ್ಷೇತ್ರಗಳಲ್ಲಿ ಟಿಕೆಟ್ ಬದಲಾವಣೆ..!
ಆಂತರಿಕ ಸಮಸ್ಯೆಗಳ ಮೆಟ್ಟಿ ನಿಲ್ಲುವ ಸವಾಲು..!

ಕರ್ನಾಟಕ ವಿಧಾನಸಭಾ ಚುನಾವಣೆಯ ಹೀನಾಯ ಸೋಲು ಬಿಜೆಪಿ(BJP) ಪಾಲಿಗೆ ನಿಜಕ್ಕೂ ಆಘಾತ ನೀಡಿತ್ತು. ಈ ಸೋಲಿನ ಬಳಿಕ ಕಂಗೆಟ್ಟು ಕೂತಿದ್ದ ರಾಜ್ಯ ಬಿಜೆಪಿಗೆ ಈಗ ಹೊಸ ಸಾರಥಿಯ ಘೋಷಣೆಯಾಗಿದೆ. ಶಿಕಾರಿವೀರನ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ(B.Y.Vijayendra) ಅವರಿಗೆ ಕರ್ನಾಟಕ ಕಮಲ ಪಡೆಯ ಸೇನಾಧಿಪತ್ಯ ದಕ್ಕಿದೆ. ಈ ಕ್ಷಣದಿಂದಲೇ ರಾಜ್ಯ ರಾಜಕಾರಣದ ದಿಕ್ಕುದೆಸೆ ಬದಲಾಗೋ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಗಿದಾಗಿನಿಂದಲೂ,  ಕರ್ನಾಟಕದ(Karnataka) ಕೇಸರಿ ಕೋಟೆಯಲ್ಲಿ ಸದ್ದು ಮಾಡ್ತಿದ್ದದ್ದು ಎರಡೇ ಪ್ರಶ್ನೆ. ಮೊದಲನೇದು, ಬಿಜೆಪಿ ರಾಜ್ಯಾಧ್ಯಕ್ಷ ಯಾರು ಅನ್ನೋದು. ಇನ್ನೊಂದು ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಅನ್ನೋದು. ಆದ್ರೆ ಈ ಪೈಕಿ ಮೊದಲನೇ ಪ್ರಶ್ನೆಗೆ, ಬಿಜೆಪಿ ಹೈಕಮಾಂಡ್ ಕಡೆಗೂ ಉತ್ತರ ಕೊಟ್ಟಿದೆ. ಲೋಕಸಭಾ ಚುನಾವಣೆಯ(Loksabha) ಹೊಸ್ತಿಲಲ್ಲೇ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.ಅಧ್ಯಕ್ಷ ಪಟ್ಟಕ್ಕೋಸ್ಕರ ಪಟ್ಟು ಹಿಡಿದಿದ್ದ ಹಲವರನ್ನ ಓವರ್ ಟೇಕ್ ಮಾಡಿ, ಕೆಲವರನ್ನ ಸೈಡಿಗೆ ತಳ್ಳಿ ಅಂತೂ, ಮಗನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನನ್ನಾಗಿ ಮಾಡುವಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ. ಆದ್ರೆ ವಿಜಯೇಂದ್ರ ಹಾದಿ ಅಂದುಕೊಂಡಷ್ಟು ಸುಲಭವಿಲ್ಲ. ಯಾಕೆಂದ್ರೆ ಕಾಂಗ್ರೆಸ್ ಮಣಿಸೋದು ನೇರ ಸವಾಲಾಗಿದ್ರೂ ಕೂಡ ಆಂತರಿಕ ಭಿನ್ನಾಭಿಪ್ರಾಯವನ್ನ ಸರಿದೂಗಿಸಿಕೊಂಡು ಹೋಗೋದು ಅತಿ ಮುಖ್ಯ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು ಇವೆ. 

ಇದನ್ನೂ ವೀಕ್ಷಿಸಿ:  ಹುಟ್ಟು ಹಬ್ಬದಂದು ಭೈರಾದೇವಿ ಟೀಸರ್ ರಿಲೀಸ್..! ಲುಕ್ ನೋಡಿ ಫ್ಯಾನ್ಸ್ ಶಾಕ್..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more