ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

ಕಮಲವನ್ನು ಗೆಲ್ಲಿಸೋ ಮೊದಲು.. ಬಿಜೆಪಿ ಗೆಲ್ಲುವ ಚಾಲೆಂಜ್..!

Published : Nov 13, 2023, 02:03 PM ISTUpdated : Nov 13, 2023, 02:04 PM IST

ಲೋಕ ಗೆಲ್ಲೋಕೆ ಮೋದಿ ವಿಜಯಾಸ್ತ್ರ ಪ್ರಯೋಗ!
10 ರಿಂದ 12 ಕ್ಷೇತ್ರಗಳಲ್ಲಿ ಟಿಕೆಟ್ ಬದಲಾವಣೆ..!
ಆಂತರಿಕ ಸಮಸ್ಯೆಗಳ ಮೆಟ್ಟಿ ನಿಲ್ಲುವ ಸವಾಲು..!

ಕರ್ನಾಟಕ ವಿಧಾನಸಭಾ ಚುನಾವಣೆಯ ಹೀನಾಯ ಸೋಲು ಬಿಜೆಪಿ(BJP) ಪಾಲಿಗೆ ನಿಜಕ್ಕೂ ಆಘಾತ ನೀಡಿತ್ತು. ಈ ಸೋಲಿನ ಬಳಿಕ ಕಂಗೆಟ್ಟು ಕೂತಿದ್ದ ರಾಜ್ಯ ಬಿಜೆಪಿಗೆ ಈಗ ಹೊಸ ಸಾರಥಿಯ ಘೋಷಣೆಯಾಗಿದೆ. ಶಿಕಾರಿವೀರನ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ(B.Y.Vijayendra) ಅವರಿಗೆ ಕರ್ನಾಟಕ ಕಮಲ ಪಡೆಯ ಸೇನಾಧಿಪತ್ಯ ದಕ್ಕಿದೆ. ಈ ಕ್ಷಣದಿಂದಲೇ ರಾಜ್ಯ ರಾಜಕಾರಣದ ದಿಕ್ಕುದೆಸೆ ಬದಲಾಗೋ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಗಿದಾಗಿನಿಂದಲೂ,  ಕರ್ನಾಟಕದ(Karnataka) ಕೇಸರಿ ಕೋಟೆಯಲ್ಲಿ ಸದ್ದು ಮಾಡ್ತಿದ್ದದ್ದು ಎರಡೇ ಪ್ರಶ್ನೆ. ಮೊದಲನೇದು, ಬಿಜೆಪಿ ರಾಜ್ಯಾಧ್ಯಕ್ಷ ಯಾರು ಅನ್ನೋದು. ಇನ್ನೊಂದು ವಿರೋಧ ಪಕ್ಷದ ನಾಯಕ ಯಾರಾಗ್ತಾರೆ ಅನ್ನೋದು. ಆದ್ರೆ ಈ ಪೈಕಿ ಮೊದಲನೇ ಪ್ರಶ್ನೆಗೆ, ಬಿಜೆಪಿ ಹೈಕಮಾಂಡ್ ಕಡೆಗೂ ಉತ್ತರ ಕೊಟ್ಟಿದೆ. ಲೋಕಸಭಾ ಚುನಾವಣೆಯ(Loksabha) ಹೊಸ್ತಿಲಲ್ಲೇ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.ಅಧ್ಯಕ್ಷ ಪಟ್ಟಕ್ಕೋಸ್ಕರ ಪಟ್ಟು ಹಿಡಿದಿದ್ದ ಹಲವರನ್ನ ಓವರ್ ಟೇಕ್ ಮಾಡಿ, ಕೆಲವರನ್ನ ಸೈಡಿಗೆ ತಳ್ಳಿ ಅಂತೂ, ಮಗನನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನನ್ನಾಗಿ ಮಾಡುವಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ. ಆದ್ರೆ ವಿಜಯೇಂದ್ರ ಹಾದಿ ಅಂದುಕೊಂಡಷ್ಟು ಸುಲಭವಿಲ್ಲ. ಯಾಕೆಂದ್ರೆ ಕಾಂಗ್ರೆಸ್ ಮಣಿಸೋದು ನೇರ ಸವಾಲಾಗಿದ್ರೂ ಕೂಡ ಆಂತರಿಕ ಭಿನ್ನಾಭಿಪ್ರಾಯವನ್ನ ಸರಿದೂಗಿಸಿಕೊಂಡು ಹೋಗೋದು ಅತಿ ಮುಖ್ಯ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು ಇವೆ. 

ಇದನ್ನೂ ವೀಕ್ಷಿಸಿ:  ಹುಟ್ಟು ಹಬ್ಬದಂದು ಭೈರಾದೇವಿ ಟೀಸರ್ ರಿಲೀಸ್..! ಲುಕ್ ನೋಡಿ ಫ್ಯಾನ್ಸ್ ಶಾಕ್..!

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more