ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

Published : Aug 19, 2023, 11:22 AM IST

ಮಂಡ್ಯದ ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ.
 

ಮಂಡ್ಯ: ಜಿಲ್ಲೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಜೆಡಿಎಸ್‌ಗೆ(JDS) ಮತ್ತೊಂದು ಶಾಕ್ ನೀಡಲಾಗಿದೆ. ಜೆಡಿಎಸ್‌ನ ಬಲಿಷ್ಠ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿವೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜುಗೆ(C.S.Puttaraju) ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಸುಳಿವು ಕೊಟ್ಟಿದ್ದಾರೆ. ಮಂಡ್ಯದ (Mandya)ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ (Congress) ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಸಿ.ಎಸ್‌. ಪುಟ್ಟರಾಜುಗೆ ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್‌ಗೆ ಸೆಳೆಯಲು ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಸದ್ಯ ಜೆಡಿಎಸ್‌ನಿಂದ ಸಿಎಸ್ ಪುಟ್ಟರಾಜು ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ JDS ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು. ಲೋಕಸಭೆಗೆ ಪುಟ್ಟರಾಜು‌ ಅಭ್ಯರ್ಥಿ ಮಾಡಿ‌‌ ಮಂಡ್ಯ ಗೆಲ್ಲಲು ‘ಕೈ’ ಪ್ಲಾನ್ ಮಾಡಿದೆ. ಸೋಲಿನ ಬಳಿಕ JDS ಕಾರ್ಯಕ್ರಮಗಳಲ್ಲಿ ಪುಟ್ಟರಾಜು ಕಾಣಿಸಿಕೊಳ್ಳುತ್ತಿಲ್ಲ. HDK, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಜತೆ ಭಿನ್ನಮತವಿದ್ದು, ಇದನ್ನೇ ಕಾಂಗ್ರೆಸ್‌ ದಾಳವಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more