Cabinet Reshuffle ಸಂಪುಟ ಪುನಾರಚನೆಯ ಸುಳಿವು ನೀಡಿದ್ರಾ ಸಿಎಂ ಬೊಮ್ಮಾಯಿ?

Jan 24, 2022, 7:09 PM IST

ಬೆಂಗಳೂರು, (ಜ. 24): ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಶಾಸಕರು ಒತ್ತಡ ಹೇರುತ್ತಿದ್ದಾರೆ.

Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ

ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಅಭಯ್ ಪಾಟೀಲ್ ಸೇರಿದಂತೆ ಇನ್ನೂ ಹಲವು ಶಾಸಕರು ಸಂಪುಟ ಪುನರ್‌‌ ರಚನೆ ಮಾಡುವಂತೆ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ. ಇನ್ನು ಇದರ ಮಧ್ಯೆ ಸಿಎಂ ಬೊಮ್ಮಾಯಿ ಅವರು ಸಂಪುಟ ಪುನಾರಚನೆ ಬಗ್ಗೆ ಸುಳಿವು ಕೊಟ್ಟಿದ್ದಾರೆ.