ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

Published : Aug 22, 2023, 02:23 PM IST

ಮತ್ತೆ ಧಗ ಧಗಿಸಿತು ಕಾವೇರಿ ಜಲಯುದ್ಧದ ಕಿಚ್ಚು..!
ಲೋಕಸಭಾ ಚುನಾವಣೆಗಾಗಿ ಈ ನಿರ್ಧಾರನಾ..?
ಕಾವೇರಿ ನೀರಿಗಾಗಿ ಬೀದಿಗಿಳಿದ ಕೇಸರಿ ಕಲಿಗಳು..!

ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಕೊರತೆಯ ನಡುವೆಯೂ ತಮಿಳುನಾಡಿಗೆ(Tamilnadu) ನೀರು ಬಿಟ್ಟಿರೋದನ್ನು ವಿರೋಧಿಸಿ ಸಕ್ಕರೆ ನಾಡಿನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಒಂದ್ಕಡೆ ಬಿಜೆಪಿ(BJP) ನಾಯಕರ ಪ್ರತಿಭಟನೆ, ಮತ್ತೊಂದ್ಕಡೆ ರೈತ ಸಂಘ, ಕನ್ನಡ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸುತ್ತಿವೆ. ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಿರ್ಧಾರವನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕಳೆದ 14ನೇ ತಾರೀಕಿನಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬೆಳೆಗಳ ರಕ್ಷಣೆಗಾಗಿ ಪ್ರತಿ ದಿನ 24 ಸಾವಿರ ಕ್ಯೂಸೆಕ್ ಕಾವೇರಿ(Cauvery) ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಅಂತ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಇದಕ್ಕೂ ಮೊದಲು ನಡೆದ ಕಾವೇರಿ ಪ್ರಾಧಿಕಾರದ ಸಭೆಯಲ್ಲೂ ಕ್ಯಾತೆ ತೆಗೆದಿದ್ದ ತಮಿಳುನಾಡು, 15 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕ(Karnataka) ಸರ್ಕಾರಕ್ಕೆ ಆದೇಶ ನೀಡುವಂತೆ ಪ್ರಾಧಿಕಾರವನ್ನು ಆಗ್ರಹಿಸಿತ್ತು. ಆದರೆ ಕಾವೇರಿ ನದಿಪಾತ್ರದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಕಾರಣ ನೀರು ಹರಿಸಲು ಸಾಧ್ಯವಿಲ್ಲ ಅಂತ ಪ್ರಾಧಿಕಾರದ ಮುಂದೆ ಕರ್ನಾಟಕ ಸರ್ಕಾರ ವಾದ ಮಂಡಿಸಿತ್ತು. ಇದಾದ ನಂತರ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರಿಂದ  12,631 ನೀರು ಬಿಡಲಾಗಿದೆ.

ಇದನ್ನೂ ವೀಕ್ಷಿಸಿ:  ಪ್ರವಾಸದ ಹೊತ್ತಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಲಡಾಖ್ ಪ್ರವಾಸದ ಹಿಂದಿದೆಯಾ ರಾಜಕಾರಣ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more