ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

ಸಿದ್ದು ಸರ್ಕಾರದ ನಡೆಯ ಹಿಂದಿದ್ಯಾ I.N.D.I.A. ಋಣ..? ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ನೀರು ಬಿಟ್ಟದ್ದೇಕೆ..?

Published : Aug 22, 2023, 02:23 PM IST

ಮತ್ತೆ ಧಗ ಧಗಿಸಿತು ಕಾವೇರಿ ಜಲಯುದ್ಧದ ಕಿಚ್ಚು..!
ಲೋಕಸಭಾ ಚುನಾವಣೆಗಾಗಿ ಈ ನಿರ್ಧಾರನಾ..?
ಕಾವೇರಿ ನೀರಿಗಾಗಿ ಬೀದಿಗಿಳಿದ ಕೇಸರಿ ಕಲಿಗಳು..!

ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಕೊರತೆಯ ನಡುವೆಯೂ ತಮಿಳುನಾಡಿಗೆ(Tamilnadu) ನೀರು ಬಿಟ್ಟಿರೋದನ್ನು ವಿರೋಧಿಸಿ ಸಕ್ಕರೆ ನಾಡಿನಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಒಂದ್ಕಡೆ ಬಿಜೆಪಿ(BJP) ನಾಯಕರ ಪ್ರತಿಭಟನೆ, ಮತ್ತೊಂದ್ಕಡೆ ರೈತ ಸಂಘ, ಕನ್ನಡ ಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸುತ್ತಿವೆ. ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಿರ್ಧಾರವನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಕಾವೇರಿ ನೀರು ಬಿಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕಳೆದ 14ನೇ ತಾರೀಕಿನಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬೆಳೆಗಳ ರಕ್ಷಣೆಗಾಗಿ ಪ್ರತಿ ದಿನ 24 ಸಾವಿರ ಕ್ಯೂಸೆಕ್ ಕಾವೇರಿ(Cauvery) ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಅಂತ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಇದಕ್ಕೂ ಮೊದಲು ನಡೆದ ಕಾವೇರಿ ಪ್ರಾಧಿಕಾರದ ಸಭೆಯಲ್ಲೂ ಕ್ಯಾತೆ ತೆಗೆದಿದ್ದ ತಮಿಳುನಾಡು, 15 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕ(Karnataka) ಸರ್ಕಾರಕ್ಕೆ ಆದೇಶ ನೀಡುವಂತೆ ಪ್ರಾಧಿಕಾರವನ್ನು ಆಗ್ರಹಿಸಿತ್ತು. ಆದರೆ ಕಾವೇರಿ ನದಿಪಾತ್ರದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವ ಕಾರಣ ನೀರು ಹರಿಸಲು ಸಾಧ್ಯವಿಲ್ಲ ಅಂತ ಪ್ರಾಧಿಕಾರದ ಮುಂದೆ ಕರ್ನಾಟಕ ಸರ್ಕಾರ ವಾದ ಮಂಡಿಸಿತ್ತು. ಇದಾದ ನಂತರ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರಿಂದ  12,631 ನೀರು ಬಿಡಲಾಗಿದೆ.

ಇದನ್ನೂ ವೀಕ್ಷಿಸಿ:  ಪ್ರವಾಸದ ಹೊತ್ತಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಲಡಾಖ್ ಪ್ರವಾಸದ ಹಿಂದಿದೆಯಾ ರಾಜಕಾರಣ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more