CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

Published : Oct 20, 2023, 01:55 PM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲಿ ಡಿಕೆಶಿಗೆ ಸಾಲು ಸಾಲು ಸವಾಲುಗಳು
ಡಿಕೆಶಿ ಮೇಲೆ ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ 
ತನಿಖೆ ವೇಳೆ 200ಕೋಟಿ ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದ ಸಿಬಿಐ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಪ್ರಕರಣದ ಕುರಿತಾಗಿ, ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ಡಿಕೆಶಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಲೋಕಸಭೆ(Loksabha) ಎಲೆಕ್ಷನ್ ಸಂದರ್ಭದಲ್ಲಿ ಡಿಕೆಶಿ ಇದು ಹಿನ್ನಡೆಯಾದ್ರೂ ಆಗಬಹುದು. ಡಿಕೆಶಿಗೆ ಇದೊಂದೇ ಅಲ್ಲ, ಕಳೆದ ಕೆಲವು ದಿನಗಳಿಂದ ಒಂದರ ಹಿಂದೊಂದು ಸಂಕಷ್ಟಗಳು ಎದುರಾಗುತ್ತಿವೆ. ಡಿಕೆಶಿ(DK Shivakumar) ಅವರ ಮೇಲೆ ಈ ಹಿಂದೆ ಸಿಬಿಐ ದಾಳಿಯಾಗಿತ್ತು. ದಾಳಿ ಸಂದರ್ಭದಲ್ಲಿ ಡಿಕೆಶಿ ಅವರ ಬಳಿ ಅಕ್ರಮ ಆಸ್ತಿ ಇರುವುದಾಗಿ ಸಿಬಿಐ ತನ್ನ ಎಫ್ಐಆರ್‌ನಲ್ಲಿ ಉಲ್ಲೇಖಿಸಿತ್ತು. 2014 ರಿಂದ 2018ರ ವರೆಗೆ ಡಿಕೆಶಿ ಅವರ ಆಸ್ತಿ ಗಳಿಕೆ ಬಗ್ಗೆ ಸಿಬಿಐ(CBI) ಅನುಮಾನ ವ್ಯಕ್ತ ಪಡಿಸಿತ್ತು. ಈ ಅವಧಿಯಲ್ಲಿ ಡಿಕೆಶಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ಸಿಬಿಐ ತನ್ನ ಕೇಸ್ನಲ್ಲಿ ದಾಖಲಿಸಿತ್ತು. ಈ ಕುರಿತು ವಿಚಾರಣೆ ನಡೆಯುವಾಗ ಕೆಲ ದಿನಗಳ ಕಾಲ ಡಿಕೆಶಿ ದೆಹಲಿ ಜೈಲಿನಲ್ಲೂ ಇರಬೇಕಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ವಿರುದ್ಧದ ಎಫ್ಐಆರ್(FIR) ಅನ್ನು ರದ್ದುಗೊಳಿಸುವಂತೆ ಕೆಲ ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಸಿಬಿಐ ಅವರು ತಯರಿಸಿರುವ ಎಫ್ಐಆರ್ನಲ್ಲಿ  ಯಾವುದೇ ಹುರುಳಿಲ್ಲ. ಹೀಗಾಗಿ ಅದನ್ನು ರದ್ದು ಪಡಿಸಿಸಬೇಕೆಂದು ಹೈಕೋರ್ಟ್ಗೆ ಅಪೀಲ್ ಮಾಡಿದ್ದರು ಡಿಕೆಶಿ. ಆದ್ರೆ ಡಿಕೆಶಿ ಅವರ ಅರ್ಜಿಯನ್ನು ಇಂದು ಹೈಕೋರ್ಟ್ ತಿರಸ್ಕರಿಸಿದೆ. 

ಇದನ್ನೂ ವೀಕ್ಷಿಸಿ: News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more