CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

Published : Oct 20, 2023, 01:55 PM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲಿ ಡಿಕೆಶಿಗೆ ಸಾಲು ಸಾಲು ಸವಾಲುಗಳು
ಡಿಕೆಶಿ ಮೇಲೆ ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ 
ತನಿಖೆ ವೇಳೆ 200ಕೋಟಿ ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದ ಸಿಬಿಐ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಪ್ರಕರಣದ ಕುರಿತಾಗಿ, ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ಡಿಕೆಶಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಲೋಕಸಭೆ(Loksabha) ಎಲೆಕ್ಷನ್ ಸಂದರ್ಭದಲ್ಲಿ ಡಿಕೆಶಿ ಇದು ಹಿನ್ನಡೆಯಾದ್ರೂ ಆಗಬಹುದು. ಡಿಕೆಶಿಗೆ ಇದೊಂದೇ ಅಲ್ಲ, ಕಳೆದ ಕೆಲವು ದಿನಗಳಿಂದ ಒಂದರ ಹಿಂದೊಂದು ಸಂಕಷ್ಟಗಳು ಎದುರಾಗುತ್ತಿವೆ. ಡಿಕೆಶಿ(DK Shivakumar) ಅವರ ಮೇಲೆ ಈ ಹಿಂದೆ ಸಿಬಿಐ ದಾಳಿಯಾಗಿತ್ತು. ದಾಳಿ ಸಂದರ್ಭದಲ್ಲಿ ಡಿಕೆಶಿ ಅವರ ಬಳಿ ಅಕ್ರಮ ಆಸ್ತಿ ಇರುವುದಾಗಿ ಸಿಬಿಐ ತನ್ನ ಎಫ್ಐಆರ್‌ನಲ್ಲಿ ಉಲ್ಲೇಖಿಸಿತ್ತು. 2014 ರಿಂದ 2018ರ ವರೆಗೆ ಡಿಕೆಶಿ ಅವರ ಆಸ್ತಿ ಗಳಿಕೆ ಬಗ್ಗೆ ಸಿಬಿಐ(CBI) ಅನುಮಾನ ವ್ಯಕ್ತ ಪಡಿಸಿತ್ತು. ಈ ಅವಧಿಯಲ್ಲಿ ಡಿಕೆಶಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ಸಿಬಿಐ ತನ್ನ ಕೇಸ್ನಲ್ಲಿ ದಾಖಲಿಸಿತ್ತು. ಈ ಕುರಿತು ವಿಚಾರಣೆ ನಡೆಯುವಾಗ ಕೆಲ ದಿನಗಳ ಕಾಲ ಡಿಕೆಶಿ ದೆಹಲಿ ಜೈಲಿನಲ್ಲೂ ಇರಬೇಕಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ವಿರುದ್ಧದ ಎಫ್ಐಆರ್(FIR) ಅನ್ನು ರದ್ದುಗೊಳಿಸುವಂತೆ ಕೆಲ ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಸಿಬಿಐ ಅವರು ತಯರಿಸಿರುವ ಎಫ್ಐಆರ್ನಲ್ಲಿ  ಯಾವುದೇ ಹುರುಳಿಲ್ಲ. ಹೀಗಾಗಿ ಅದನ್ನು ರದ್ದು ಪಡಿಸಿಸಬೇಕೆಂದು ಹೈಕೋರ್ಟ್ಗೆ ಅಪೀಲ್ ಮಾಡಿದ್ದರು ಡಿಕೆಶಿ. ಆದ್ರೆ ಡಿಕೆಶಿ ಅವರ ಅರ್ಜಿಯನ್ನು ಇಂದು ಹೈಕೋರ್ಟ್ ತಿರಸ್ಕರಿಸಿದೆ. 

ಇದನ್ನೂ ವೀಕ್ಷಿಸಿ: News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more