ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ

ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ

Published : May 14, 2023, 12:17 PM IST

ನಮಗೆ ಇಂತಹ ವಯಸ್ಸಿನಲ್ಲಿ ನಮ್ಮ ತಂದೆ ನೋಡಿಕೊಳ್ಳುವ ಭಾಗ್ಯ ಸಿಗಲಿಲ್ಲ. ನಾನು ಆಗಿದ್ರೆ ದೇವೇಗೌಡರು ಕೂತಿದ್ದ ಕಡೆಯೇ ಅವರನ್ನು ಸುಖ, ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಗೆಲುವು ಸಾಧಿಸುವ ಮೂಲಕ, ತಮ್ಮ ರಾಜಕೀಯ ವಿರೋಧಿ ಜೆಡಿಎಸ್ ಅಭ್ಯರ್ಥಿ ಸುರೇಶ್‌ಗೌಡಗೆ ತೀವ್ರ ಮುಖಭಂಗ ಉಂಟುಮಾಡಿದ್ದಾರೆ. ಇಂದು ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ನಮ್ಮ ತಂದೆ ಆಗಿದ್ರೆ, ಕೂತಿದ್ದ ಕಡೆ ಬಹಳ ಸುಖ, ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ. ಅವರು ನನ್ನ ವಿರುದ್ಧ ಏನು ಮಾತನಾಡಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರನ್ನು ಈ ವಯಸ್ಸಿನಲ್ಲಿ ಆರೋಗ್ಯದ ಸಮಸ್ಯೆ ನಡುವೆಯೂ ಸುತ್ತಾಡಿಸಿದ್ದು ತಪ್ಪು ಎಂದು ಆದಿಚುಂಚನಗಿರಿಯಲ್ಲಿ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ. ಅವರು ಕೂತಿರುವ ಕಡೆ ಆಶೀರ್ವಾದ ತೆಗೆದುಕೊಂಡು ಬರಬೇಕಿತ್ತು. ಅವರು ರಾಜ್ಯ ಸುತ್ತಿದ್ದು ಸರಿಯಲ್ಲ. ಅವರನ್ನು ಸುತ್ತಿಸಿದವರಿಗೆ ದೇವರು ಬುದ್ಧಿಕೊಡಲಿ. ಅವರಿಂದ ಉಪಯೋಗ ಪಡೆದುಕೊಂಡು ಎಂಎಲ್‌ಎ, ಮಂತ್ರಿ, ಮುಖ್ಯಮಂತ್ರಿ ಎಲ್ಲ ಖಾತೆ ಅನುಭವಿಸಿದ್ದಾರೆ. ಈಗಲೂ ಅವರನ್ನು ಬಿಡಲು ತಯಾರು ಇಲ್ಲ ಎಂದು ಚಲುವರಾಯಸ್ವಾಮಿ ದೇವೇಗೌಡರನ್ನ ಹಾಡಿ ಹೊಗಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more