ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ

ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ

Published : May 14, 2023, 12:17 PM IST

ನಮಗೆ ಇಂತಹ ವಯಸ್ಸಿನಲ್ಲಿ ನಮ್ಮ ತಂದೆ ನೋಡಿಕೊಳ್ಳುವ ಭಾಗ್ಯ ಸಿಗಲಿಲ್ಲ. ನಾನು ಆಗಿದ್ರೆ ದೇವೇಗೌಡರು ಕೂತಿದ್ದ ಕಡೆಯೇ ಅವರನ್ನು ಸುಖ, ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಗೆಲುವು ಸಾಧಿಸುವ ಮೂಲಕ, ತಮ್ಮ ರಾಜಕೀಯ ವಿರೋಧಿ ಜೆಡಿಎಸ್ ಅಭ್ಯರ್ಥಿ ಸುರೇಶ್‌ಗೌಡಗೆ ತೀವ್ರ ಮುಖಭಂಗ ಉಂಟುಮಾಡಿದ್ದಾರೆ. ಇಂದು ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ನಮ್ಮ ತಂದೆ ಆಗಿದ್ರೆ, ಕೂತಿದ್ದ ಕಡೆ ಬಹಳ ಸುಖ, ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ. ಅವರು ನನ್ನ ವಿರುದ್ಧ ಏನು ಮಾತನಾಡಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರನ್ನು ಈ ವಯಸ್ಸಿನಲ್ಲಿ ಆರೋಗ್ಯದ ಸಮಸ್ಯೆ ನಡುವೆಯೂ ಸುತ್ತಾಡಿಸಿದ್ದು ತಪ್ಪು ಎಂದು ಆದಿಚುಂಚನಗಿರಿಯಲ್ಲಿ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ. ಅವರು ಕೂತಿರುವ ಕಡೆ ಆಶೀರ್ವಾದ ತೆಗೆದುಕೊಂಡು ಬರಬೇಕಿತ್ತು. ಅವರು ರಾಜ್ಯ ಸುತ್ತಿದ್ದು ಸರಿಯಲ್ಲ. ಅವರನ್ನು ಸುತ್ತಿಸಿದವರಿಗೆ ದೇವರು ಬುದ್ಧಿಕೊಡಲಿ. ಅವರಿಂದ ಉಪಯೋಗ ಪಡೆದುಕೊಂಡು ಎಂಎಲ್‌ಎ, ಮಂತ್ರಿ, ಮುಖ್ಯಮಂತ್ರಿ ಎಲ್ಲ ಖಾತೆ ಅನುಭವಿಸಿದ್ದಾರೆ. ಈಗಲೂ ಅವರನ್ನು ಬಿಡಲು ತಯಾರು ಇಲ್ಲ ಎಂದು ಚಲುವರಾಯಸ್ವಾಮಿ ದೇವೇಗೌಡರನ್ನ ಹಾಡಿ ಹೊಗಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more