'ದೆಹಲಿಗೆ ಹೋಗೋದು ವೈಯಕ್ತಿಕ : ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ'

Jun 30, 2021, 1:28 PM IST

ಮೈಸೂರು (ಜೂ.30):  ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಹೀಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಮತ್ತೆ ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡ. ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. 

ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಹೊಸ ಬೆಳವಣಿಗೆ? ..

ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಮೈಸೂರಿನಲ್ಲಿ ವಿಜಯೇಂದ್ರ ಸ್ಪಷ್ಟಪಡಿಸಿದರು.