ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

Published : Jun 26, 2024, 01:39 PM IST

2 ಬಾರಿ ಸೋತಿರೋ ನಿಖಿಲ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ಒತ್ತಾಯ
ಚನ್ನಪಟ್ಟಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ನಿಖಿಲ್ ನಿಲ್ಲುವಂತೆ ಒತ್ತಡ
ನಿಖಿಲ್ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಕಾರ್ಯಕರ್ತರ ಒತ್ತಾಯ

ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ(Channapatna By poll) ಅಖಾಡ ರಂಗೇರುತ್ತಿದೆ. ಬಿಜೆಪಿ-ಜೆಡಿಎಸ್(BJP-JDS) ನಡುವೆ ಟಿಕೆಟ್‌ಗಾಗಿ(Ticket) ಫೈಟ್ ಜೋರಾಗಿದೆ. ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಜೆಡಿಎಸ್ ಕಾರ್ಯಕರ್ತರಿಂದ ಕ್ಯಾಂಪೇನ್ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಒತ್ತಾಯ ಕೇಳಿಬರುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್(Nikhil Kumaraswamy) ಕಣಕ್ಕಿಳಿಸುವಂತೆ ಎನ್‌ಡಿಎ ಮೈತ್ರಿಕೂಟಕ್ಕೆ ಆಗ್ರಹ ಮಾಡಲಾಗುತ್ತಿದೆ. ಎರಡು ಬಾರಿ ಸೋತಿರೋ ನಿಖಿಲ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ಒತ್ತಾಯ ಕೇಳಿಬರುತ್ತಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ನಿಖಿಲ್ ನಿಲ್ಲುವಂತೆ ಒತ್ತಡ ಹೇರಲಾಗುತ್ತಿದೆ. ನಿಖಿಲ್ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಕಾರ್ಯಕರ್ತರು ಹೇಳುತ್ತಿದ್ದು, ಸಿ.ಪಿ.ಯೋಗೇಶ್ವರ್ (CP Yogeshwar)ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಸಿಪಿ ಯೋಗೇಶ್ವರ್ ಗೆ ತಾಲೂಕಿನ ನಾಡಿಮಿಡಿತ ಗೊತ್ತಿದೆ. ಕಾಂಗ್ರೆಸ್ ಎದುರಿಸಲು ಸಿಪಿವೈ ಸಮರ್ಥ ಅಭ್ಯರ್ಥಿ ಎಂದು ಬೆಂಬಲಿಗರು ಹೇಳುತ್ತಿದ್ದಾರೆ. ಡಾ.ಮಂಜುನಾಥ್ ಗೆಲುವಿಗೆ ಸಿ.ಪಿ.ಯೋಗೇಶ್ವರ್ ಹೋರಾಟ ನಡೆಸಿದ್ದು, ಉಪಚುನಾವಣೆ ಟಿಕೆಟ್ ನೀಡುವಂತೆ ಚನ್ನಪಟ್ಟಣ ತಾಲೂಕು ಬಿಜೆಪಿ ಘಟಕ ಒತ್ತಾಯ ಮಾಡುತ್ತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more