ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ: ಡಿ.ಕೆ.ಶಿವಕುಮಾರ್

ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ: ಡಿ.ಕೆ.ಶಿವಕುಮಾರ್

Published : Mar 28, 2023, 05:12 PM IST

ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿಗಳು ದೊಡ್ಡ ಗೊಂದಲ ಸೃಷ್ಟಿ ಮಾಡಿದ್ದಾರೆ. ಯಡಿಯೂರಪ್ಪ ಮನೆ ಮೇಲೆ ಕಲ್ಲು ಹೊಡೆಯುವುದು, ಬಿಜೆಪಿಯವರ ಆಂತರಿಕ ಕುತಂತ್ರವಾಗಿದೆ.

ಬೆಂಗಳೂರು (ಮಾ.28): ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿಗಳು ದೊಡ್ಡ ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯ ವೇದಿಕೆಗೆ ತರಬೇಕು ಅಂತ ಯಡಿಯೂರಪ್ಪ ಮನೆಗೆ ಅಮಿತ್ ಷಾ ಅವರನ್ನು ಕರೆದುಕೊಮಡು ಹೋಗಿ ಬೆನ್ನು ತಟ್ಟಿಸಿ ಬಂದಿದ್ದಾರೆ. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ಹೊಡೆಯುವುದು, ಬಿಜೆಪಿಯವರ ಆಂತರಿಕ ಕುತಂತ್ರವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯ ವೇದಿಕೆಗೆ ಕರೆತರಲು ಅಮಿತ್‌ ಶಾ ಅವರನ್ನು ಅವರ ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮೀಸಲಾತಿ ಹಂಚಿಕೆ ವಿಚಾರದಲ್ಲಿ ಯಡಿಯೂರಪ್ಪನವರು ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಿರಲಿಲ್ಲ. ಆದರೂ, ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದರೆ ಇದು ಬಿಜೆಪಿಯ ಆಂತರಿಕ ಕುತಂತ್ರವಾಗಿದೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಬೇಕು ಅಂತ ಕಲ್ಲು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ರಾಷ್ಟ್ರೀಯ ನಾಯಕರು ಕಡಿವಾಣ ಹಾಕ್ತಾರೆ: 
ಮುಖ್ಯಮಂತ್ರಿಗಳ ಮೇಲೆ ಕಲ್ಲು ಹೊಡೆದಿದ್ರೆ ಓಕೆ ಫೈನ್. ಮೀಸಲಾತಿ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ ಯಡಿಯೂರಪ್ಪ ಅವರ ಮನೆ ಮೇಲೆ ಮಾಡ್ತಾರೆ ಅಂದರೆ ಇದು ಬಿಜೆಪಿಯ ಆಂತರಿಕ ಸಮಸ್ಯೆ ಆಗಿದೆ. ಬಿಜೆಪಿಯಲ್ಲಿ ಯಾರಿಗೂ ಒಬ್ಬರಿಗೊಬ್ಬರು ಸಮಾಧಾನ ಇಲ್ಲ. ನ್ಯಾಷನಲ್ ಲೀಡರ್ಸ್ ಗಳು ಎಲ್ಲರಿಗೂ ಕಡಿವಾಣ ಹಾಕಿ ಹೆದರಿಸಿ ಬೆದರಿಸಿದ್ದಾರೆ. ರೈಟ್, ಲೆಫ್ಟ್ ಗೆ ಹೋಗ್ಬೇಡಿ ಅಂತ ಫೋನ್ ಎಲ್ಲಾ ಕಿತ್ಕೊಂಡು ಅಚ್ಚುಕಟ್ಟಾಗಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬದ್ಧತೆಯಿಂದ ಮೀಸಲಾತಿ ಕೊಡಬೇಕು:
ಯಡಿಯೂರಪ್ಪ ಮಾತನಾಡೋದು ಅವರಿಗೆ ಬಿಟ್ಟ ವಿಚಾರವಾಗಿದೆ. ನಾನು ಒಂದು ಪಕ್ಷದ ರಾಜ್ಯ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಇದು ರಾಜ್ಯ ಅಲ್ಲ ರಾಷ್ಟ್ರದಲ್ಲೇ ಒಂದು ಗೊಂದಲ ಸೃಷ್ಟಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ವಿರುದ್ಧವಾಗಿ ಇಬ್ಬರು ಮಂತ್ರಿಗಳು ಕೂತು ಮೀಸಲಾತಿ ಮಾಡಿದ್ದಾರೆ. ಯಾವುದೇ ವರದಿ ಇಲ್ಲ ಹಿಂದುಳಿದ ವರ್ಗಗಳ ಆಯೋಗದ ವರದಿ ಇಲ್ಲ. ಡಿಸೆಂಬರ್‌ನಲ್ಲಿ ಕೊಟ್ಟ ಮಧ್ಯಂತರ ವರದಿಯಲ್ಲಿ  ತೀರ್ಮಾನ ಆಗಿಲ್ಲ. ಮೀಸಲಾತಿಯನ್ನ ಸರಿಯಾದ ಬದ್ಧತೆಯಿಂದ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more