Mar 23, 2023, 10:58 PM IST
ಪಂಚಮಸಾಲಿ, ಒಕ್ಕಲಿಗ ಸಮುದಾಯ ಸೇರಿದಂತೆ ಹಲವರ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಮೀಸಲಾತಿ ಘೋಷಣೆ ಮಾಡಿದ ಬೆನ್ನಲ್ಲೇ ದಾಖಲಾಗಿದ್ದ ಪಿಐಎಲ್ನಿಂದ ಹೈಕೋರ್ಟ್ ಯಥಾಸ್ಥಿತಿ ಕಾಪಾಡಲು ಸೂಚಿಸಿತ್ತು. ಇದೀಗ ಕೇಂದ್ರ ಸರ್ಕಾರದ ಉತ್ತರ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತೆರವು ನೀಡಿದೆ.ಮೀಸಲಾತಿ ಕುರಿತು ನಾಳೆ ಕ್ಯಾಬಿನೆಟ್ನಲ್ಲಿ ಮಹತ್ವದ ಸಭೆ ನಡೆಯಲಿದೆ. ಎಷ್ಟು ಪ್ರಮಾಣದ ಮೀಸಲಾತಿ ನೀಡಬೇಕು ಅನ್ನೋದು ನಾಳೆಯ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.ಒಕ್ಕಲಿಗರಿಗೆ ಶೇಕಡಾ 6, ಲಿಂಗಾಯಿತರಿಗೆ ಶೇಕಡಾ 7ರಷ್ಟು ಮೀಸಲಾತಿ ಸಿಗುವ ಸಾಧ್ಯತೆಗಳು ಇವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.