BJP Politics: ತಡರಾತ್ರಿ 3.30ಕ್ಕೆ ಸಿಎಂ ಬೊಮ್ಮಾಯಿ ಮೀಟಿಂಗ್‌: ಕುತೂಹಲ ಮೂಡಿಸಿದ ಮಾತುಕತೆ

Jan 20, 2022, 9:25 AM IST

ಬೆಂಗಳೂರು(ಜ.20): ತಡರಾತ್ರಿವರೆಗೂ ನಗರದ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೀಟಿಂಗ್‌ ನಡೆಸಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೌದು, ತಡರಾತ್ರಿ 3.30 ವರೆಗೂ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಜೊತೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಜಿಲ್ಲೆ, ಬೆಂಗಳೂರಿನಲ್ಲಿ ಪಕ್ಷ ಸಂಘಟನೆ ಬಗ್ಗೆ ಮೀಟಿಂಗ್‌ನಲ್ಲಿ ಚರ್ಚೆ ನಡೆದಿದೆ. 

ಕಟ್ಟಡದ ಮೇಲೆ ಕುಳಿತು ಗಾಳಿಪಟ ಹಾರಿಸಿದ ಕಿಲಾಡಿ ಕೋತಿ... ವಿಡಿಯೋ ವೈರಲ್