ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?

Published : Feb 25, 2023, 02:46 PM IST

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು.

ಬೆಂಗಳೂರು (ಫೆ.25): ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದ ಕುರಿತು ನ್ಯಾ.ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯ ಆಯ್ದ ಭಾಗವನ್ನು ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದರು. 

ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ತನಿಖಾಸ್ತ್ರ ಪ್ರಯೋಗಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ. ‘ಜಮೀನು ಮಾಲೀಕರ ಹಿತಾಸಕ್ತಿಗಾಗಿ 800ಕ್ಕೂ ಹೆಚ್ಚು ಎಕರೆ ಜಮೀನನ್ನು ‘ರೀಡೂ’ ಹೆಸರಿನಲ್ಲಿ ಡಿನೋಟಿಫಿಕೇಷನ್‌ ಮಾಡಿರುವುದು ಸತ್ಯ’ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದರು ಎಂದೂ ಆರೋಪಿಸಿದರು. ಇನ್ನು ನಾನು ಅಧಿಕಾರಕ್ಕೆ ಬರುವ ಮುನ್ನವೇ ಅರ್ಕಾವತಿ ಲೇಔಟ್‌ ಡಿನೋಟಿಫೈ ಆಗಿತ್ತು. ನಾನು ಮಾಡಿದ್ದು ‘ರೀಡೂ’ ಅಲ್ಲ. ಸುಪ್ರೀಂಕೋರ್ಟ್‌ ಮಾನದಂಡದ ಮೇಲೆ ನಾನು ಅನುಮೋದನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more