ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?

Published : Feb 25, 2023, 02:46 PM IST

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು.

ಬೆಂಗಳೂರು (ಫೆ.25): ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದ ಕುರಿತು ನ್ಯಾ.ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯ ಆಯ್ದ ಭಾಗವನ್ನು ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದರು. 

ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ತನಿಖಾಸ್ತ್ರ ಪ್ರಯೋಗಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ. ‘ಜಮೀನು ಮಾಲೀಕರ ಹಿತಾಸಕ್ತಿಗಾಗಿ 800ಕ್ಕೂ ಹೆಚ್ಚು ಎಕರೆ ಜಮೀನನ್ನು ‘ರೀಡೂ’ ಹೆಸರಿನಲ್ಲಿ ಡಿನೋಟಿಫಿಕೇಷನ್‌ ಮಾಡಿರುವುದು ಸತ್ಯ’ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದರು ಎಂದೂ ಆರೋಪಿಸಿದರು. ಇನ್ನು ನಾನು ಅಧಿಕಾರಕ್ಕೆ ಬರುವ ಮುನ್ನವೇ ಅರ್ಕಾವತಿ ಲೇಔಟ್‌ ಡಿನೋಟಿಫೈ ಆಗಿತ್ತು. ನಾನು ಮಾಡಿದ್ದು ‘ರೀಡೂ’ ಅಲ್ಲ. ಸುಪ್ರೀಂಕೋರ್ಟ್‌ ಮಾನದಂಡದ ಮೇಲೆ ನಾನು ಅನುಮೋದನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more