News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

Published : Dec 24, 2022, 11:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಚರ್ಚೆ ಮಾಡಲು ಸಿಎಂ ಬಸವರಾಜ ಬೊಮಮಾಯಿ ದೆಹಲಿ ದಂಡಯಾತ್ರೆಗೆ ಹೊರಟಿದ್ದಾರೆ. ರಾಜ್ಯದಲ್ಲಿ ಕೆ.ಎಸ್. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಮತ್ತು ಸಿ.ಪಿ. ಯೋಗೇಶ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ. ಮಂಡ್ಯದಲ್ಲಿ ಚುನಾವಣೆ ಗೆಲ್ಲುವುದು ಬಿಜೆಪಿಗೆ ಕಬ್ಬಿಣದ ಕಡೆಯಾಗಿದೆ. ಹಳೆ ಮೈಸೂರಲ್ಲಿ ಬಿಜೆಪಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು? ಸಿದ್ದರಾಮಯ್ಯ ಅವರ ಸ್ಪರ್ಧೆ ಕೋಲಾರದಿಂದಲಾ ಅಥವಾ ವರುಣಾ ದಿಂದಲೋ? ಮೀಸಲಾತಿ ವಾರ್‌. ನಿರಾಣಿ ಸಮರ? ಪಂಚಮಸಾಲಿಗೆ 2ಎ ಮೀಸಲಾತಿ ಕೊಡಬೇಡಿ. ರಾಜ್ಯ ಸರ್ಕಾರದ ವಿರುದ್ಧ ಶೇ.40% ಕಮೀಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ ನಾಲ್ವರು ಪದಾಧಿಕಾರಿಗಳನ್ನು ಬಂಧನ ಮಾಡಲಾಗಿದೆ.

ಬೆಂಗಳೂರು (ಡಿ.24): ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈಶ್ವರಪ್ಪ ಅವರ ಮೇಲೆ ಗುತ್ತಿಗೆದಾರನ ಸಾವು ಹಿನ್ನೆಲೆಯಲ್ಲಿ ಕಾರಣವೆಂಬ ಆರೋಪ, ರಮೇಶ್‌ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿಯ ಅತ್ಯಾಚಾರ ಆರೋಪಗಳಿಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ತೊಡೆ ತಟ್ಟಿ ನಿಲ್ಲಲು ಸಚಿವ ಸ್ಥಾನ ಇದ್ದರೆ ಪ್ರಭಲವಾಗಿ ಸ್ಪರ್ಧೆ ಮಾಡಬಹುದು ಎಂಬುದು ಸಿ.ಪಿ. ಯೋಗೇಶ್ವರ ಅವರ ಆಲೋಚನೆ ಆಗಿದೆ. ಆದರೆ, ಸಿಎಂ ಬೊಮ್ಮಾಯಿ ಅವರು 2023ರಲ್ಲಿ ಪಕ್ಷವನ್ನು ಸರ್ಕಾರವನ್ನು ತರಲು ಅಧಿಕಾರಕ್ಕೆ ತರುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ವಿಶೇಷವಾಗಿ ನಾವು ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ. ಇನ್ನು ರಮೇಶ್‌ ಜಾರಕಿಹೊಳಿ ಅವರು ಹೊಲ ಹೋಗಲಿ, ಮನೆ ಹೋಗಲಿ. ಆದರೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸೋಲಿಸುವ ಬಗ್ಗೆ ತೊಡೆ ತಟ್ಟಿ ನಿಂತಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?