News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

News Hour: ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಬಂಧನ!

Published : Dec 24, 2022, 11:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಚರ್ಚೆ ಮಾಡಲು ಸಿಎಂ ಬಸವರಾಜ ಬೊಮಮಾಯಿ ದೆಹಲಿ ದಂಡಯಾತ್ರೆಗೆ ಹೊರಟಿದ್ದಾರೆ. ರಾಜ್ಯದಲ್ಲಿ ಕೆ.ಎಸ್. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಮತ್ತು ಸಿ.ಪಿ. ಯೋಗೇಶ್‌ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ. ಮಂಡ್ಯದಲ್ಲಿ ಚುನಾವಣೆ ಗೆಲ್ಲುವುದು ಬಿಜೆಪಿಗೆ ಕಬ್ಬಿಣದ ಕಡೆಯಾಗಿದೆ. ಹಳೆ ಮೈಸೂರಲ್ಲಿ ಬಿಜೆಪಿ ಗೆದ್ದಿದ್ದೆಷ್ಟು? ಸೋತಿದ್ದೆಷ್ಟು? ಸಿದ್ದರಾಮಯ್ಯ ಅವರ ಸ್ಪರ್ಧೆ ಕೋಲಾರದಿಂದಲಾ ಅಥವಾ ವರುಣಾ ದಿಂದಲೋ? ಮೀಸಲಾತಿ ವಾರ್‌. ನಿರಾಣಿ ಸಮರ? ಪಂಚಮಸಾಲಿಗೆ 2ಎ ಮೀಸಲಾತಿ ಕೊಡಬೇಡಿ. ರಾಜ್ಯ ಸರ್ಕಾರದ ವಿರುದ್ಧ ಶೇ.40% ಕಮೀಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ ನಾಲ್ವರು ಪದಾಧಿಕಾರಿಗಳನ್ನು ಬಂಧನ ಮಾಡಲಾಗಿದೆ.

ಬೆಂಗಳೂರು (ಡಿ.24): ದೆಹಲಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈಶ್ವರಪ್ಪ ಅವರ ಮೇಲೆ ಗುತ್ತಿಗೆದಾರನ ಸಾವು ಹಿನ್ನೆಲೆಯಲ್ಲಿ ಕಾರಣವೆಂಬ ಆರೋಪ, ರಮೇಶ್‌ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿಯ ಅತ್ಯಾಚಾರ ಆರೋಪಗಳಿಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ತೊಡೆ ತಟ್ಟಿ ನಿಲ್ಲಲು ಸಚಿವ ಸ್ಥಾನ ಇದ್ದರೆ ಪ್ರಭಲವಾಗಿ ಸ್ಪರ್ಧೆ ಮಾಡಬಹುದು ಎಂಬುದು ಸಿ.ಪಿ. ಯೋಗೇಶ್ವರ ಅವರ ಆಲೋಚನೆ ಆಗಿದೆ. ಆದರೆ, ಸಿಎಂ ಬೊಮ್ಮಾಯಿ ಅವರು 2023ರಲ್ಲಿ ಪಕ್ಷವನ್ನು ಸರ್ಕಾರವನ್ನು ತರಲು ಅಧಿಕಾರಕ್ಕೆ ತರುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ವಿಶೇಷವಾಗಿ ನಾವು ಗ್ರಾಮೀಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂದು ರಮೇಶ್‌ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ. ಇನ್ನು ರಮೇಶ್‌ ಜಾರಕಿಹೊಳಿ ಅವರು ಹೊಲ ಹೋಗಲಿ, ಮನೆ ಹೋಗಲಿ. ಆದರೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸೋಲಿಸುವ ಬಗ್ಗೆ ತೊಡೆ ತಟ್ಟಿ ನಿಂತಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!