ಸಿಎಂ ಬಸವರಾಜ ಬೊಮ್ಮಾಯಿ ಉಪಚುನಾವಣೆ ಸೋಲು ಒಪ್ಪಿಕೊಂಡ್ರಾ?

Oct 22, 2021, 4:38 PM IST

ಹಾವೇರಿ, (ಅ.22): ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರು ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಯುತ್ತಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ.

ಬೈ ಎಲೆಕ್ಷನ್‌ನಲ್ಲಿ ಬಿಜೆಪಿಗೆ ಮತ ನೀಡಿ ಎನ್ನುವ ಆಡಿಯೋ ವೈರಲ್: ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ

ಇನ್ನು ಇಂದು (ಅ.22 ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾನಗಲ್‌ನಲ್ಲಿ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದು, ಸಿಎಂ ಈಗಾಗಲೇ ಉಪಚುನಾವಣೆ ಸೋಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ಸಿಎಂ ಈ ಫಲಿತಾಂಶ ಪರಿಣಾಮ ಬೀರಲ್ಲ ಎನ್ನುತ್ತಿದ್ದಾರೆ ಎಂದರು.