ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!

ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!

Published : Mar 02, 2023, 11:12 PM ISTUpdated : Mar 02, 2023, 11:14 PM IST

ರಾಜಕೀಯ ಹಗ್ಗಜಗ್ಗಾಟ ನಡುವೆ ಶಿವಾಜಿ ಪ್ರತಿಮೆ ಉದ್ಘಾಟನೆ, ಕರ್ನಾಟಕದಲ್ಲಿ ಬಿಜೆಪಿ ರಥಯಾತ್ರೆ ಅಬ್ಬರ, ಚುನಾವಣೆ ಗೆಲ್ಲಲು ಭರ್ಜರಿ ಪ್ರಚಾರ, ಬಿಜೆಪಿ ಶಾಸಕನ ಪುತ್ರ 40 ಲಕ್ಷ ರೂ ಲಂಚ ತೆಗೆದುಕೊಳ್ಳುವಾಗ ಲೋಕಾ ಬಲೆಗೆ, ರಾಮನಗರದಲ್ಲಿ ಆಸ್ಪತ್ರೆ ಉದ್ಘಾಟನೆ, ಒಂದೇ ವೇದಿಕೆಯಲ್ಲಿ ಹೆಚ್‌ಡಿಕೆ, ಅಶ್ವತ್ಥ್, ಡಿಕೆ ಸುರೇಶ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ರಾಜಕೀಯ ಬಲು ಜೋರಾಗಿದೆ.ಸರ್ಕಾರದ ಅನುದಾನದಿಂದ ನಿರ್ಮಾಣಗೊಂಡಿರುವ ಶಿವಾಜಿ ಪ್ರತಿಮೆಯನ್ನು ಇತ್ತೀಚೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡಲು ಯತ್ನಿಸಿದ್ದರು. ಇದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಪಿತ್ತ ನೆತ್ತಿಗೇರಿಸಿತ್ತು. ಇದರಿಂದ ಪ್ರತಿಮೆ ಪಾಲಿಟಿಕ್ಸ್ ಆರಂಭಗೊಂಡಿತು. ಇದೀಗ ಸರ್ಕಾರಿ ಕಾರ್ಯಕ್ರಮದ ಮೂಲಕ ಪ್ರತಿಮೆ ಉದ್ಘಾಟನೆಗೊಂಡಿದೆ. ಇದೀಗ ಇದೇ ಪ್ರತಿಮೆಯನ್ನು ಹೆಬ್ಬಾಳ್ಕರ್ ಮಾರ್ಚ್ 5 ರಂದು ಮತ್ತೆ ಉದ್ಘಾಟಿಸುತ್ತಿದ್ದಾರೆ. ಶಿ ಈ ಪ್ರತಿಮೆಯನ್ನು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆಯವರಿಂದ ಉದ್ಘಾಟನೆ ಮಾಡಲು ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಳ್ಕರ್ ತಯಾರಿ ನಡೆಸಿದ್ದರು. ಸರ್ಕಾರದ ಹಣದಿಂದ ಕಟ್ಟಿಸಿದ ಶಿವಾಜಿ ಪ್ರತಿಮೆ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದಾರೆ . ಇಂದಿನ ಕಾರ್ಯಕ್ರಮಕ್ಕೈ ಗೈರಾಗಿರುವ ಹೆಬ್ಬಾಳ್ಕರ್, ಮಾರ್ಚ್ 5ರಂದು ಪ್ರತಿಮೆ ಉದ್ಘಾಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more