ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!

ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!

Published : Mar 02, 2023, 11:12 PM ISTUpdated : Mar 02, 2023, 11:14 PM IST

ರಾಜಕೀಯ ಹಗ್ಗಜಗ್ಗಾಟ ನಡುವೆ ಶಿವಾಜಿ ಪ್ರತಿಮೆ ಉದ್ಘಾಟನೆ, ಕರ್ನಾಟಕದಲ್ಲಿ ಬಿಜೆಪಿ ರಥಯಾತ್ರೆ ಅಬ್ಬರ, ಚುನಾವಣೆ ಗೆಲ್ಲಲು ಭರ್ಜರಿ ಪ್ರಚಾರ, ಬಿಜೆಪಿ ಶಾಸಕನ ಪುತ್ರ 40 ಲಕ್ಷ ರೂ ಲಂಚ ತೆಗೆದುಕೊಳ್ಳುವಾಗ ಲೋಕಾ ಬಲೆಗೆ, ರಾಮನಗರದಲ್ಲಿ ಆಸ್ಪತ್ರೆ ಉದ್ಘಾಟನೆ, ಒಂದೇ ವೇದಿಕೆಯಲ್ಲಿ ಹೆಚ್‌ಡಿಕೆ, ಅಶ್ವತ್ಥ್, ಡಿಕೆ ಸುರೇಶ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ರಾಜಕೀಯ ಬಲು ಜೋರಾಗಿದೆ.ಸರ್ಕಾರದ ಅನುದಾನದಿಂದ ನಿರ್ಮಾಣಗೊಂಡಿರುವ ಶಿವಾಜಿ ಪ್ರತಿಮೆಯನ್ನು ಇತ್ತೀಚೆಗೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡಲು ಯತ್ನಿಸಿದ್ದರು. ಇದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಪಿತ್ತ ನೆತ್ತಿಗೇರಿಸಿತ್ತು. ಇದರಿಂದ ಪ್ರತಿಮೆ ಪಾಲಿಟಿಕ್ಸ್ ಆರಂಭಗೊಂಡಿತು. ಇದೀಗ ಸರ್ಕಾರಿ ಕಾರ್ಯಕ್ರಮದ ಮೂಲಕ ಪ್ರತಿಮೆ ಉದ್ಘಾಟನೆಗೊಂಡಿದೆ. ಇದೀಗ ಇದೇ ಪ್ರತಿಮೆಯನ್ನು ಹೆಬ್ಬಾಳ್ಕರ್ ಮಾರ್ಚ್ 5 ರಂದು ಮತ್ತೆ ಉದ್ಘಾಟಿಸುತ್ತಿದ್ದಾರೆ. ಶಿ ಈ ಪ್ರತಿಮೆಯನ್ನು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆಯವರಿಂದ ಉದ್ಘಾಟನೆ ಮಾಡಲು ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಳ್ಕರ್ ತಯಾರಿ ನಡೆಸಿದ್ದರು. ಸರ್ಕಾರದ ಹಣದಿಂದ ಕಟ್ಟಿಸಿದ ಶಿವಾಜಿ ಪ್ರತಿಮೆ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದು ಸರ್ಕಾರಿ ಕಾರ್ಯಕ್ರಮ ಆಯೋಜಿಸುವಲ್ಲಿ ಯಶಸ್ವಿಯಾಗಿದ್ದಾರೆ . ಇಂದಿನ ಕಾರ್ಯಕ್ರಮಕ್ಕೈ ಗೈರಾಗಿರುವ ಹೆಬ್ಬಾಳ್ಕರ್, ಮಾರ್ಚ್ 5ರಂದು ಪ್ರತಿಮೆ ಉದ್ಘಾಟನೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more