ಹುಬ್ಬಳ್ಳಿ ಆಡಿಯೋ ಅವಾಂತರ ಬಳಿಕ ಯಡಿಯೂರಪ್ಪ ಅಲರ್ಟ್...!

Nov 6, 2019, 8:05 PM IST

ಬೆಂಗಳೂರು, [ನ.06]: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಕೋರ್ ಕಮಿಟಿ ಸಭೆಯಲ್ಲಿನ ಆಡಿಯೋ ಲೀಕ್ ಆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚೆತ್ತುಕೊಂಡಿದ್ದು, ಡಾಲರ್ಸ್ ಕಾಲೋನಿಯ ನಿವಾಸ ಮತ್ತು ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡುವವರು ಒಳಗೆ ಮೊಬೈಲ್ ಫೋನ್ ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದೆ. 

ಬಿಎಸ್ ವೈ ಅವರ ಆಡಿಯೋ ಔಟ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಸುಪ್ರೀಂ ಮೆಟ್ಟಿಲೇರಿದೆ. ಇದರಿಂದ ಬಿಎಸ್ ವೈ ತೀವ್ರ ಮುಜುಗರ ಉಂಟುಮಾಡಿದೆ. ಇದರಿಂದ ಈ ನಿರ್ಧಾರ ಮಾಡಲಾಗಿದೆ.