ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

ಕ್ಯಾಪ್ಟನ್ ಆಫ್ ದಿ ಶಿಪ್ ಕುಮಾರಣ್ಣ: ಲೋಕಸಭೆಯ ಸನಿಹದಲ್ಲಿ ಇದೆಂಥಾ ಬದಲಾವಣೆ..?

Published : Oct 20, 2023, 02:36 PM IST

ಹೊಸ ತೀರ್ಮಾನಕ್ಕೂ ಎದುರಾಯ್ತು ಆಕ್ಷೇಪ
ಹೊಸ ನಿರ್ಧಾರಕ್ಕೂ ಎದುರಾಯ್ತು ಆಕ್ಷೇಪ
ದೇವೇಗೌಡರ ವಿರುದ್ಧ ಇಬ್ರಾಹಿಂ ಗರಂ..!

ಒಂದು ಕಡೆಯಲ್ಲಿ ಲೋಕಸಭಾ ಚುನಾವಣೆ ದಿನ ಹತ್ತಿರವಾಗ್ತಾ ಇದೆ. ಇನ್ನೊಂದು ಕಡೆ ಎಲ್ಲ ಪಕ್ಷಗಳು ತಮ್ಮ ತಮ್ಮ ಗೆಲುವಿಗೆ ಪಕ್ಷ ಸಂಘಟನೆಯಲ್ಲಿ ಬ್ಯುಸಿ ಇವೆ. ಬಟ್ ಜಾತ್ಯಾತೀತ ಜನತಾದಳದಲ್ಲಿ ಮಾತ್ರ ಭಾರಿ ಬದಲಾವಣೆ ಕಂಡು ಬಂದಿದೆ. ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ(CM Ibrahim) ಅವರನ್ನ ಅತ್ಯಂತ ನಾಜೂಕಾಗಿ ಪಕ್ಷದಿಂದ ವಜಾ ಮಾಡಲಾಗಿದೆ. ಹೊಸ ಅಧ್ಯಕ್ಷರಾಗಿ ಮಾಜಿ ಸಿಎಂ ಕುಮಾರಸ್ವಾಮಿಯವರನ್ನ(HD Kumaraswamy) ನೇಮಕ ಮಾಡಲಾಗಿದೆ. ಲೋಕಸಭೆ (Loksabha)ಎಲೆಕ್ಷನ್ ಹತ್ತಿರವಾಗ್ತಾ ಇರೋ ಸಂದರ್ಭದಲ್ಲಿ ಜೆಡಿಎಸ್(JDS) ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಇದ್ದ ಸಿಎಂ ಇಬ್ರಾಹಿಂ ಬದಲಾಗಿ ಕುಮಾರಸ್ವಾಮಿ ಅವರು ನೇಮಕವಾಗಿದ್ದಾರೆ. ಇದೊಂದು ಘೋಷಣೆ ಬಂದಿದ್ದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪಿಎಂ ದೇವೆಗೌಡರರಿಂದ. ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಕುಮಾರಸ್ವಾಮಿ ಅವರ ವಿರುದ್ಧ ಮಾತನ್ನಾಡೋಕೆ ಶುರು ಮಾಡಿದ್ದರು. ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆಯೂ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಎನ್ ಡಿ ಎ ಮೈತ್ರಿಗೆ ನನ್ನ ಬೆಂಬಲವಿಲ್ಲ ಅನ್ನೋದ್ರ ಜೊತೆಗೆ ನಾನೇ ಒರಿಜಿನಲ್  ಜೆಡಿಎಸ್ ಅಧ್ಯಕ್ಷ , ನನ್ನನ್ನ ತೆಗೆದು ಹಾಕೋದಿಕ್ಕೆ ಆಗೋದಿಲ್ಲ ಅಂತ ಗುಡುಗಿದ್ರು.

ಇದನ್ನೂ ವೀಕ್ಷಿಸಿ:  CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more