ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

Published : Sep 04, 2024, 08:56 PM IST

ಸಿಎಂ ಸಿದ್ದರಾಮಯ್ಯನವರು ಅಪ್ರತಿಮ ಸ್ವಾತಂತ್ರ್ಯ ಯೋಧ ಸಂಗೊಳ್ಳಿ ರಾಯಣ್ಣನ ಕಥೆ ಹೇಳುವ ಮೂಲಕ ತಮಗೂ ಮೋಸ, ಸಂಚು, ಷಡ್ಯಂತ್ರ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಅಪ್ರತಿಮ ಸ್ವಾತಂತ್ರ್ಯ ಯೋಧ, ಬ್ರೀಟೀಷರ ನಿದ್ದೆಗೆಡಿಸಿದ ವೀರ ಸಂಗೊಳ್ಳಿ ರಾಯಣ್ಣನ ಕಥೆ ನಿಮಗೆ ಗೊತ್ತೇ ಇರುತ್ತದೆ. ರಕ್ತ ಸಂಬಂಧಿಯ ಸಂಚಿಗೆ ಬಲಿಯಾಗಿ ಬ್ರಿಟಿಷರಿಗೆ ಸೆರೆಯಾಗಿದ್ದ ಸಂಗೊಳ್ಳಿ ರಾಯಣ್ಣನ ಕಥೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ತಮಗೂ ಹಿತ ಶತ್ರುಗಳ ಕಾಟವಿದೆ ಎಂಬುದರ ಸುಳಿವು ನೀಡಿದ್ದಾರೆ. ಜೊತೆಗೆ, ಹಿತಶತ್ರುಗಳಿಗೂ ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ. 

ಮುಡಾ ಚಕ್ರವ್ಯೂಹ ಎದ್ದು ನಿಂತಿರೋ ಹೊತ್ತಲ್ಲಿ ಸಿದ್ದು ಬಾಯಲ್ಲಿ ಮೋಸ, ಸಂಚು, ಷಡ್ಯಂತ್ರದ ಮಾತು ಕೇಳಿಬಂದಿದೆ. ಐದು ದಿನಗಳಲ್ಲಿ ಎರಡು ಬಾರಿ ರಾಯಣ್ಣನಿಗಾದ ಮೋಸದ ಕಥೆ ಹೇಳಿದ ಸಿಎಂ ಹೇಳಿದರು. ಜೊತೆಯಲ್ಲಿದ್ದವರಿಂದಲೇ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿರೋ ಹೊತ್ತಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಜೊತೆಗಾರರಿಂದಲೇ ಆದ ಮೋಸದ ಕಥೆಯನ್ನು ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯಗೂ ಅಂಥದ್ದೇ ಮೋಸವಾಯ್ತಾ.? ಸಿದ್ದು ವಿರುದ್ಧ ತೆರೆಯ ಹಿಂದೆ ನಡೀತಾ ಮುಡಾ ಸಂಚು, ಅಷ್ಟಕ್ಕೂ ಏನದು ತೆರೆಯ ಹಿಂದಿನ ರಾಜಕಾರಣ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರು 'ಪರದೆ ಕೇ ಪೀಚೆ' ಆಡ್ತಿರೋ ಆಟ ಅದೆಷ್ಟು ರೋಚಕವಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!

ರಾಜ್ಯದಲ್ಲಿ ತಮಗೆ ಹಿತ ಶತ್ರುಗಳ ಕಥೆ ಹೇಳಿದ ಸಿದ್ದರಾಮಯ್ಯ, ಶತ್ರು ಕಾಟದಿಂದ ಪಾರಾಗಲು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದಾರೆ. ತಮ್ಮ ಸುತ್ತಲೂ ಶತ್ರು ಕೋಟೆಯೇ ಎದ್ದು ನಿಂತಿದೆ. ಶತ್ರುಕಾಟದಿಂದ ಪಾರು ಮಾಡುವಂತೆ ದೇವಿಗೆ ಮೊರೆ ಇಟ್ಟಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!