ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

Published : Sep 04, 2024, 08:56 PM IST

ಸಿಎಂ ಸಿದ್ದರಾಮಯ್ಯನವರು ಅಪ್ರತಿಮ ಸ್ವಾತಂತ್ರ್ಯ ಯೋಧ ಸಂಗೊಳ್ಳಿ ರಾಯಣ್ಣನ ಕಥೆ ಹೇಳುವ ಮೂಲಕ ತಮಗೂ ಮೋಸ, ಸಂಚು, ಷಡ್ಯಂತ್ರ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಅಪ್ರತಿಮ ಸ್ವಾತಂತ್ರ್ಯ ಯೋಧ, ಬ್ರೀಟೀಷರ ನಿದ್ದೆಗೆಡಿಸಿದ ವೀರ ಸಂಗೊಳ್ಳಿ ರಾಯಣ್ಣನ ಕಥೆ ನಿಮಗೆ ಗೊತ್ತೇ ಇರುತ್ತದೆ. ರಕ್ತ ಸಂಬಂಧಿಯ ಸಂಚಿಗೆ ಬಲಿಯಾಗಿ ಬ್ರಿಟಿಷರಿಗೆ ಸೆರೆಯಾಗಿದ್ದ ಸಂಗೊಳ್ಳಿ ರಾಯಣ್ಣನ ಕಥೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ತಮಗೂ ಹಿತ ಶತ್ರುಗಳ ಕಾಟವಿದೆ ಎಂಬುದರ ಸುಳಿವು ನೀಡಿದ್ದಾರೆ. ಜೊತೆಗೆ, ಹಿತಶತ್ರುಗಳಿಗೂ ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ. 

ಮುಡಾ ಚಕ್ರವ್ಯೂಹ ಎದ್ದು ನಿಂತಿರೋ ಹೊತ್ತಲ್ಲಿ ಸಿದ್ದು ಬಾಯಲ್ಲಿ ಮೋಸ, ಸಂಚು, ಷಡ್ಯಂತ್ರದ ಮಾತು ಕೇಳಿಬಂದಿದೆ. ಐದು ದಿನಗಳಲ್ಲಿ ಎರಡು ಬಾರಿ ರಾಯಣ್ಣನಿಗಾದ ಮೋಸದ ಕಥೆ ಹೇಳಿದ ಸಿಎಂ ಹೇಳಿದರು. ಜೊತೆಯಲ್ಲಿದ್ದವರಿಂದಲೇ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿರೋ ಹೊತ್ತಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಜೊತೆಗಾರರಿಂದಲೇ ಆದ ಮೋಸದ ಕಥೆಯನ್ನು ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯಗೂ ಅಂಥದ್ದೇ ಮೋಸವಾಯ್ತಾ.? ಸಿದ್ದು ವಿರುದ್ಧ ತೆರೆಯ ಹಿಂದೆ ನಡೀತಾ ಮುಡಾ ಸಂಚು, ಅಷ್ಟಕ್ಕೂ ಏನದು ತೆರೆಯ ಹಿಂದಿನ ರಾಜಕಾರಣ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರು 'ಪರದೆ ಕೇ ಪೀಚೆ' ಆಡ್ತಿರೋ ಆಟ ಅದೆಷ್ಟು ರೋಚಕವಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!

ರಾಜ್ಯದಲ್ಲಿ ತಮಗೆ ಹಿತ ಶತ್ರುಗಳ ಕಥೆ ಹೇಳಿದ ಸಿದ್ದರಾಮಯ್ಯ, ಶತ್ರು ಕಾಟದಿಂದ ಪಾರಾಗಲು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದಾರೆ. ತಮ್ಮ ಸುತ್ತಲೂ ಶತ್ರು ಕೋಟೆಯೇ ಎದ್ದು ನಿಂತಿದೆ. ಶತ್ರುಕಾಟದಿಂದ ಪಾರು ಮಾಡುವಂತೆ ದೇವಿಗೆ ಮೊರೆ ಇಟ್ಟಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?