ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

Published : Sep 04, 2024, 08:56 PM IST

ಸಿಎಂ ಸಿದ್ದರಾಮಯ್ಯನವರು ಅಪ್ರತಿಮ ಸ್ವಾತಂತ್ರ್ಯ ಯೋಧ ಸಂಗೊಳ್ಳಿ ರಾಯಣ್ಣನ ಕಥೆ ಹೇಳುವ ಮೂಲಕ ತಮಗೂ ಮೋಸ, ಸಂಚು, ಷಡ್ಯಂತ್ರ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಅಪ್ರತಿಮ ಸ್ವಾತಂತ್ರ್ಯ ಯೋಧ, ಬ್ರೀಟೀಷರ ನಿದ್ದೆಗೆಡಿಸಿದ ವೀರ ಸಂಗೊಳ್ಳಿ ರಾಯಣ್ಣನ ಕಥೆ ನಿಮಗೆ ಗೊತ್ತೇ ಇರುತ್ತದೆ. ರಕ್ತ ಸಂಬಂಧಿಯ ಸಂಚಿಗೆ ಬಲಿಯಾಗಿ ಬ್ರಿಟಿಷರಿಗೆ ಸೆರೆಯಾಗಿದ್ದ ಸಂಗೊಳ್ಳಿ ರಾಯಣ್ಣನ ಕಥೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ತಮಗೂ ಹಿತ ಶತ್ರುಗಳ ಕಾಟವಿದೆ ಎಂಬುದರ ಸುಳಿವು ನೀಡಿದ್ದಾರೆ. ಜೊತೆಗೆ, ಹಿತಶತ್ರುಗಳಿಗೂ ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ. 

ಮುಡಾ ಚಕ್ರವ್ಯೂಹ ಎದ್ದು ನಿಂತಿರೋ ಹೊತ್ತಲ್ಲಿ ಸಿದ್ದು ಬಾಯಲ್ಲಿ ಮೋಸ, ಸಂಚು, ಷಡ್ಯಂತ್ರದ ಮಾತು ಕೇಳಿಬಂದಿದೆ. ಐದು ದಿನಗಳಲ್ಲಿ ಎರಡು ಬಾರಿ ರಾಯಣ್ಣನಿಗಾದ ಮೋಸದ ಕಥೆ ಹೇಳಿದ ಸಿಎಂ ಹೇಳಿದರು. ಜೊತೆಯಲ್ಲಿದ್ದವರಿಂದಲೇ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿರೋ ಹೊತ್ತಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಜೊತೆಗಾರರಿಂದಲೇ ಆದ ಮೋಸದ ಕಥೆಯನ್ನು ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯಗೂ ಅಂಥದ್ದೇ ಮೋಸವಾಯ್ತಾ.? ಸಿದ್ದು ವಿರುದ್ಧ ತೆರೆಯ ಹಿಂದೆ ನಡೀತಾ ಮುಡಾ ಸಂಚು, ಅಷ್ಟಕ್ಕೂ ಏನದು ತೆರೆಯ ಹಿಂದಿನ ರಾಜಕಾರಣ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರು 'ಪರದೆ ಕೇ ಪೀಚೆ' ಆಡ್ತಿರೋ ಆಟ ಅದೆಷ್ಟು ರೋಚಕವಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!

ರಾಜ್ಯದಲ್ಲಿ ತಮಗೆ ಹಿತ ಶತ್ರುಗಳ ಕಥೆ ಹೇಳಿದ ಸಿದ್ದರಾಮಯ್ಯ, ಶತ್ರು ಕಾಟದಿಂದ ಪಾರಾಗಲು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದಾರೆ. ತಮ್ಮ ಸುತ್ತಲೂ ಶತ್ರು ಕೋಟೆಯೇ ಎದ್ದು ನಿಂತಿದೆ. ಶತ್ರುಕಾಟದಿಂದ ಪಾರು ಮಾಡುವಂತೆ ದೇವಿಗೆ ಮೊರೆ ಇಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!