ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

Published : Sep 04, 2024, 08:56 PM IST

ಸಿಎಂ ಸಿದ್ದರಾಮಯ್ಯನವರು ಅಪ್ರತಿಮ ಸ್ವಾತಂತ್ರ್ಯ ಯೋಧ ಸಂಗೊಳ್ಳಿ ರಾಯಣ್ಣನ ಕಥೆ ಹೇಳುವ ಮೂಲಕ ತಮಗೂ ಮೋಸ, ಸಂಚು, ಷಡ್ಯಂತ್ರ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಅಪ್ರತಿಮ ಸ್ವಾತಂತ್ರ್ಯ ಯೋಧ, ಬ್ರೀಟೀಷರ ನಿದ್ದೆಗೆಡಿಸಿದ ವೀರ ಸಂಗೊಳ್ಳಿ ರಾಯಣ್ಣನ ಕಥೆ ನಿಮಗೆ ಗೊತ್ತೇ ಇರುತ್ತದೆ. ರಕ್ತ ಸಂಬಂಧಿಯ ಸಂಚಿಗೆ ಬಲಿಯಾಗಿ ಬ್ರಿಟಿಷರಿಗೆ ಸೆರೆಯಾಗಿದ್ದ ಸಂಗೊಳ್ಳಿ ರಾಯಣ್ಣನ ಕಥೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ತಮಗೂ ಹಿತ ಶತ್ರುಗಳ ಕಾಟವಿದೆ ಎಂಬುದರ ಸುಳಿವು ನೀಡಿದ್ದಾರೆ. ಜೊತೆಗೆ, ಹಿತಶತ್ರುಗಳಿಗೂ ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ. 

ಮುಡಾ ಚಕ್ರವ್ಯೂಹ ಎದ್ದು ನಿಂತಿರೋ ಹೊತ್ತಲ್ಲಿ ಸಿದ್ದು ಬಾಯಲ್ಲಿ ಮೋಸ, ಸಂಚು, ಷಡ್ಯಂತ್ರದ ಮಾತು ಕೇಳಿಬಂದಿದೆ. ಐದು ದಿನಗಳಲ್ಲಿ ಎರಡು ಬಾರಿ ರಾಯಣ್ಣನಿಗಾದ ಮೋಸದ ಕಥೆ ಹೇಳಿದ ಸಿಎಂ ಹೇಳಿದರು. ಜೊತೆಯಲ್ಲಿದ್ದವರಿಂದಲೇ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿರೋ ಹೊತ್ತಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಜೊತೆಗಾರರಿಂದಲೇ ಆದ ಮೋಸದ ಕಥೆಯನ್ನು ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯಗೂ ಅಂಥದ್ದೇ ಮೋಸವಾಯ್ತಾ.? ಸಿದ್ದು ವಿರುದ್ಧ ತೆರೆಯ ಹಿಂದೆ ನಡೀತಾ ಮುಡಾ ಸಂಚು, ಅಷ್ಟಕ್ಕೂ ಏನದು ತೆರೆಯ ಹಿಂದಿನ ರಾಜಕಾರಣ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರು 'ಪರದೆ ಕೇ ಪೀಚೆ' ಆಡ್ತಿರೋ ಆಟ ಅದೆಷ್ಟು ರೋಚಕವಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!

ರಾಜ್ಯದಲ್ಲಿ ತಮಗೆ ಹಿತ ಶತ್ರುಗಳ ಕಥೆ ಹೇಳಿದ ಸಿದ್ದರಾಮಯ್ಯ, ಶತ್ರು ಕಾಟದಿಂದ ಪಾರಾಗಲು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದಾರೆ. ತಮ್ಮ ಸುತ್ತಲೂ ಶತ್ರು ಕೋಟೆಯೇ ಎದ್ದು ನಿಂತಿದೆ. ಶತ್ರುಕಾಟದಿಂದ ಪಾರು ಮಾಡುವಂತೆ ದೇವಿಗೆ ಮೊರೆ ಇಟ್ಟಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್