ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

ಸಂಗೊಳ್ಳಿ ರಾಯಣ್ಣನ ಕಥೆ ಹೇಳಿ ಹಿತಶತ್ರುಗಳ ಸಂಚು ಬಯಲಿಗೆಳೆದ ಸಿಎಂ ಸಿದ್ದರಾಮಯ್ಯ!

Published : Sep 04, 2024, 08:56 PM IST

ಸಿಎಂ ಸಿದ್ದರಾಮಯ್ಯನವರು ಅಪ್ರತಿಮ ಸ್ವಾತಂತ್ರ್ಯ ಯೋಧ ಸಂಗೊಳ್ಳಿ ರಾಯಣ್ಣನ ಕಥೆ ಹೇಳುವ ಮೂಲಕ ತಮಗೂ ಮೋಸ, ಸಂಚು, ಷಡ್ಯಂತ್ರ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದ ಅಪ್ರತಿಮ ಸ್ವಾತಂತ್ರ್ಯ ಯೋಧ, ಬ್ರೀಟೀಷರ ನಿದ್ದೆಗೆಡಿಸಿದ ವೀರ ಸಂಗೊಳ್ಳಿ ರಾಯಣ್ಣನ ಕಥೆ ನಿಮಗೆ ಗೊತ್ತೇ ಇರುತ್ತದೆ. ರಕ್ತ ಸಂಬಂಧಿಯ ಸಂಚಿಗೆ ಬಲಿಯಾಗಿ ಬ್ರಿಟಿಷರಿಗೆ ಸೆರೆಯಾಗಿದ್ದ ಸಂಗೊಳ್ಳಿ ರಾಯಣ್ಣನ ಕಥೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ತಮಗೂ ಹಿತ ಶತ್ರುಗಳ ಕಾಟವಿದೆ ಎಂಬುದರ ಸುಳಿವು ನೀಡಿದ್ದಾರೆ. ಜೊತೆಗೆ, ಹಿತಶತ್ರುಗಳಿಗೂ ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ. 

ಮುಡಾ ಚಕ್ರವ್ಯೂಹ ಎದ್ದು ನಿಂತಿರೋ ಹೊತ್ತಲ್ಲಿ ಸಿದ್ದು ಬಾಯಲ್ಲಿ ಮೋಸ, ಸಂಚು, ಷಡ್ಯಂತ್ರದ ಮಾತು ಕೇಳಿಬಂದಿದೆ. ಐದು ದಿನಗಳಲ್ಲಿ ಎರಡು ಬಾರಿ ರಾಯಣ್ಣನಿಗಾದ ಮೋಸದ ಕಥೆ ಹೇಳಿದ ಸಿಎಂ ಹೇಳಿದರು. ಜೊತೆಯಲ್ಲಿದ್ದವರಿಂದಲೇ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿದೆ ಎಂಬ ಸುಳಿವನ್ನು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ ಎದುರಾಗಿರೋ ಹೊತ್ತಲ್ಲಿ ಸಂಗೊಳ್ಳಿ ರಾಯಣ್ಣನಿಗೆ ಜೊತೆಗಾರರಿಂದಲೇ ಆದ ಮೋಸದ ಕಥೆಯನ್ನು ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯಗೂ ಅಂಥದ್ದೇ ಮೋಸವಾಯ್ತಾ.? ಸಿದ್ದು ವಿರುದ್ಧ ತೆರೆಯ ಹಿಂದೆ ನಡೀತಾ ಮುಡಾ ಸಂಚು, ಅಷ್ಟಕ್ಕೂ ಏನದು ತೆರೆಯ ಹಿಂದಿನ ರಾಜಕಾರಣ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರು 'ಪರದೆ ಕೇ ಪೀಚೆ' ಆಡ್ತಿರೋ ಆಟ ಅದೆಷ್ಟು ರೋಚಕವಾಗಿದೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: ಗಣೇಶ ಹಬ್ಬದಲ್ಲಿ ಪ್ರಸಾದ ವಿತರಣೆಗೆ FSSAI ಲೈಸೆನ್ಸ್ ಕಡ್ಡಾಯ; ಹಿಂದೂ ವಿರೋಧಿ ಸರ್ಕಾರವೆಂದ ಬಿಜೆಪಿ!

ರಾಜ್ಯದಲ್ಲಿ ತಮಗೆ ಹಿತ ಶತ್ರುಗಳ ಕಥೆ ಹೇಳಿದ ಸಿದ್ದರಾಮಯ್ಯ, ಶತ್ರು ಕಾಟದಿಂದ ಪಾರಾಗಲು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದಾರೆ. ತಮ್ಮ ಸುತ್ತಲೂ ಶತ್ರು ಕೋಟೆಯೇ ಎದ್ದು ನಿಂತಿದೆ. ಶತ್ರುಕಾಟದಿಂದ ಪಾರು ಮಾಡುವಂತೆ ದೇವಿಗೆ ಮೊರೆ ಇಟ್ಟಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!