ತಾಕತ್ತಿದ್ರೆ ದೇಶದಲ್ಲಿ ಗ್ಯಾರಂಟಿ ಜಾರಿ ಮಾಡಿ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲ್

Aug 5, 2023, 6:53 PM IST

ಕಲಬುರಗಿ (ಆ.05): ಬಿಜೆಪಿಗೆ ಹೊಟ್ಟೆ ಉರಿ ಶುರುವಾಗಿದೆ, ಹೊಟ್ಟೆ ಉರಿಯಿಂದಾಗಿ ಬಾಯಿಗೆ ಬಂದಂತೆ ಏನೇನೋ ಮಾತಾಡ್ತಿದ್ದಾರೆ.  ತಾಕತ್ತಿದ್ರೆ ದೇಶದಲ್ಲಿ ಗ್ಯಾರಂಟಿ ಜಾರಿ ಮಾಡಿ. ಕರ್ನಾಟಕವನ್ನು ಗುಜರಾತ್‌ ಮಾಡಕ್ಕೆ ಬಿಡಲ್ಲ, ನಮ್ಮದೇ ಆದ ಕರ್ನಾಟಕ ಮಾಡೆಲ್ ಮಾಡ್ತೀವಿ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ ಎಂದು ಟೀಕಿಸಿದ ಸಿಎಂ, ಈ ರಾಜ್ಯದ ಸಂಪತ್ತನ್ನು ಲೂಟಿ ಹೊಡೆದು, ಭ್ರಷ್ಟಚಾರ ಹಾಗೂ ನಿರುದ್ಯೋಗವನ್ನು ಹೆಚ್ಚಿಸುವುದರ ಜೊತೆಗೆ ಬಡವರಿಗೆ ದಲಿತರಿಗೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡಿದ್ದು ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.