ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

Published : Jul 28, 2023, 08:24 PM IST

ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 

ಬೆಂಗಳೂರು (ಜು.28): ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ತಮ್ಮ ಎರಡು ಅವಧಿಯ ಅಧಿಕಾರಾವಧಿಯಲ್ಲಿ ಯಾವತ್ತೂ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರೇ ಪತ್ರ ಬರೆದ ಘಟನೆ ನಡೆದಿಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಹಾನಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿ, ಇನ್ನು ಯಾವತ್ತೂ ಇಂತಹ ಪತ್ರ ಬರೆಯದಂತೆ ಶಾಸಕರಿಗೆ ತಾಕೀತು ಮಾಡಿದ ಘಟನೆಯೂ ನಡೆದಿದೆ. 

ಇದಕ್ಕೆ ಪತ್ರ ಬರೆದ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್‌. ಪಾಟೀಲ್‌ ಅವರು, ಸಭೆಯ ಕ್ಷಮೆಯನ್ನು ಕೋರಿದ್ದು, ತಮ್ಮ ಅಳಲು ತೋಡಿಕೊಳ್ಳುವ ಸದುದ್ದೇಶದಿಂದಷ್ಟೇ ಪತ್ರ ಬರೆದಿದ್ದೆವು.  ಆದರೆ, ಪಿತೂರಿಕಾರರು ನಕಲಿ ಪತ್ರವೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ವಿಷಯ ದೊಡ್ಡದಾಗುವಂತೆ ಮಾಡಿದ್ದಾರೆ. ವಿಷಯ ಇಂತಹ ತಿರುವು ತೆಗೆದುಕೊಳ್ಳುತ್ತದೆ ಎಂಬ ಕಲ್ಪನೆಯಿರಲಿಲ್ಲ ಎಂದು ಸಮಜಾಯಿಷಿಯನ್ನು ನೀಡಿದರು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಶಿವಲಿಂಗೇಗೌಡ, ಬಿ.ಆರ್‌. ಪಾಟೀಲ್‌, ವೀರೇಂದ್ರ (ಪಪ್ಪಿ), ವಿನಯ ಕುಲಕರ್ಣಿ ಹಾಗೂ ಶರತ್‌ ಬಚ್ಚೇಗೌಡ ಮೊದಲಾದ ಶಾಸಕರು ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲ ಇಲಾಖೆಯ ಸಚಿವರ ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more