ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

Published : Jul 28, 2023, 08:24 PM IST

ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 

ಬೆಂಗಳೂರು (ಜು.28): ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ತಮ್ಮ ಎರಡು ಅವಧಿಯ ಅಧಿಕಾರಾವಧಿಯಲ್ಲಿ ಯಾವತ್ತೂ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರೇ ಪತ್ರ ಬರೆದ ಘಟನೆ ನಡೆದಿಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಹಾನಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿ, ಇನ್ನು ಯಾವತ್ತೂ ಇಂತಹ ಪತ್ರ ಬರೆಯದಂತೆ ಶಾಸಕರಿಗೆ ತಾಕೀತು ಮಾಡಿದ ಘಟನೆಯೂ ನಡೆದಿದೆ. 

ಇದಕ್ಕೆ ಪತ್ರ ಬರೆದ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್‌. ಪಾಟೀಲ್‌ ಅವರು, ಸಭೆಯ ಕ್ಷಮೆಯನ್ನು ಕೋರಿದ್ದು, ತಮ್ಮ ಅಳಲು ತೋಡಿಕೊಳ್ಳುವ ಸದುದ್ದೇಶದಿಂದಷ್ಟೇ ಪತ್ರ ಬರೆದಿದ್ದೆವು.  ಆದರೆ, ಪಿತೂರಿಕಾರರು ನಕಲಿ ಪತ್ರವೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ವಿಷಯ ದೊಡ್ಡದಾಗುವಂತೆ ಮಾಡಿದ್ದಾರೆ. ವಿಷಯ ಇಂತಹ ತಿರುವು ತೆಗೆದುಕೊಳ್ಳುತ್ತದೆ ಎಂಬ ಕಲ್ಪನೆಯಿರಲಿಲ್ಲ ಎಂದು ಸಮಜಾಯಿಷಿಯನ್ನು ನೀಡಿದರು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಶಿವಲಿಂಗೇಗೌಡ, ಬಿ.ಆರ್‌. ಪಾಟೀಲ್‌, ವೀರೇಂದ್ರ (ಪಪ್ಪಿ), ವಿನಯ ಕುಲಕರ್ಣಿ ಹಾಗೂ ಶರತ್‌ ಬಚ್ಚೇಗೌಡ ಮೊದಲಾದ ಶಾಸಕರು ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲ ಇಲಾಖೆಯ ಸಚಿವರ ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more