ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

Published : Jul 28, 2023, 08:24 PM IST

ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 

ಬೆಂಗಳೂರು (ಜು.28): ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ತಮ್ಮ ಎರಡು ಅವಧಿಯ ಅಧಿಕಾರಾವಧಿಯಲ್ಲಿ ಯಾವತ್ತೂ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರೇ ಪತ್ರ ಬರೆದ ಘಟನೆ ನಡೆದಿಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಹಾನಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿ, ಇನ್ನು ಯಾವತ್ತೂ ಇಂತಹ ಪತ್ರ ಬರೆಯದಂತೆ ಶಾಸಕರಿಗೆ ತಾಕೀತು ಮಾಡಿದ ಘಟನೆಯೂ ನಡೆದಿದೆ. 

ಇದಕ್ಕೆ ಪತ್ರ ಬರೆದ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್‌. ಪಾಟೀಲ್‌ ಅವರು, ಸಭೆಯ ಕ್ಷಮೆಯನ್ನು ಕೋರಿದ್ದು, ತಮ್ಮ ಅಳಲು ತೋಡಿಕೊಳ್ಳುವ ಸದುದ್ದೇಶದಿಂದಷ್ಟೇ ಪತ್ರ ಬರೆದಿದ್ದೆವು.  ಆದರೆ, ಪಿತೂರಿಕಾರರು ನಕಲಿ ಪತ್ರವೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ವಿಷಯ ದೊಡ್ಡದಾಗುವಂತೆ ಮಾಡಿದ್ದಾರೆ. ವಿಷಯ ಇಂತಹ ತಿರುವು ತೆಗೆದುಕೊಳ್ಳುತ್ತದೆ ಎಂಬ ಕಲ್ಪನೆಯಿರಲಿಲ್ಲ ಎಂದು ಸಮಜಾಯಿಷಿಯನ್ನು ನೀಡಿದರು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಶಿವಲಿಂಗೇಗೌಡ, ಬಿ.ಆರ್‌. ಪಾಟೀಲ್‌, ವೀರೇಂದ್ರ (ಪಪ್ಪಿ), ವಿನಯ ಕುಲಕರ್ಣಿ ಹಾಗೂ ಶರತ್‌ ಬಚ್ಚೇಗೌಡ ಮೊದಲಾದ ಶಾಸಕರು ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲ ಇಲಾಖೆಯ ಸಚಿವರ ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more