ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

Published : Jul 28, 2023, 08:24 PM IST

ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 

ಬೆಂಗಳೂರು (ಜು.28): ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ತಮ್ಮ ಎರಡು ಅವಧಿಯ ಅಧಿಕಾರಾವಧಿಯಲ್ಲಿ ಯಾವತ್ತೂ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರೇ ಪತ್ರ ಬರೆದ ಘಟನೆ ನಡೆದಿಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಹಾನಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿ, ಇನ್ನು ಯಾವತ್ತೂ ಇಂತಹ ಪತ್ರ ಬರೆಯದಂತೆ ಶಾಸಕರಿಗೆ ತಾಕೀತು ಮಾಡಿದ ಘಟನೆಯೂ ನಡೆದಿದೆ. 

ಇದಕ್ಕೆ ಪತ್ರ ಬರೆದ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್‌. ಪಾಟೀಲ್‌ ಅವರು, ಸಭೆಯ ಕ್ಷಮೆಯನ್ನು ಕೋರಿದ್ದು, ತಮ್ಮ ಅಳಲು ತೋಡಿಕೊಳ್ಳುವ ಸದುದ್ದೇಶದಿಂದಷ್ಟೇ ಪತ್ರ ಬರೆದಿದ್ದೆವು.  ಆದರೆ, ಪಿತೂರಿಕಾರರು ನಕಲಿ ಪತ್ರವೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ವಿಷಯ ದೊಡ್ಡದಾಗುವಂತೆ ಮಾಡಿದ್ದಾರೆ. ವಿಷಯ ಇಂತಹ ತಿರುವು ತೆಗೆದುಕೊಳ್ಳುತ್ತದೆ ಎಂಬ ಕಲ್ಪನೆಯಿರಲಿಲ್ಲ ಎಂದು ಸಮಜಾಯಿಷಿಯನ್ನು ನೀಡಿದರು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಶಿವಲಿಂಗೇಗೌಡ, ಬಿ.ಆರ್‌. ಪಾಟೀಲ್‌, ವೀರೇಂದ್ರ (ಪಪ್ಪಿ), ವಿನಯ ಕುಲಕರ್ಣಿ ಹಾಗೂ ಶರತ್‌ ಬಚ್ಚೇಗೌಡ ಮೊದಲಾದ ಶಾಸಕರು ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲ ಇಲಾಖೆಯ ಸಚಿವರ ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more