ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

ಒಂದು ಪತ್ರ ಕಾಂಗ್ರೆಸ್ ಸಭೆಗೆ ಕಾರಣವಾಯ್ತು.. ಶಾಸಕರ ಬೇಡಿಕೆಗೆ ಸಿಎಂ ಅಸ್ತು!

Published : Jul 28, 2023, 08:24 PM IST

ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು.
 

ಬೆಂಗಳೂರು (ಜು.28): ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಪ್ರಮುಖ ವಿದ್ಯಮಾನಗಳು ನಡೆಯುತ್ತಿರುವುದು ಹಾಗೂ ಮತ್ತೊಂದೆಡೆ ಸರ್ಕಾರ ಪತನಕ್ಕೆ ಬಿಜೆಪಿ-ಜೆಡಿಎಸ್‌ ಪಿತೂರಿ ನಡೆಸುತ್ತಿವೆ ಎಂಬ ಆರೋಪಗಳ ನಡುವೆಯೇ ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ತಮ್ಮ ಎರಡು ಅವಧಿಯ ಅಧಿಕಾರಾವಧಿಯಲ್ಲಿ ಯಾವತ್ತೂ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಶಾಸಕರೇ ಪತ್ರ ಬರೆದ ಘಟನೆ ನಡೆದಿಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ನನ್ನನ್ನು ಸಂಪರ್ಕಿಸಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬಹುದಿತ್ತು. ಪತ್ರ ಬರೆಯುವ ಮೂಲಕ ಪಕ್ಷ ಹಾಗೂ ಸರ್ಕಾರಕ್ಕೆ ಹಾನಿಯಾಗುವಂತಾಗಿದೆ ಎಂದು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿ, ಇನ್ನು ಯಾವತ್ತೂ ಇಂತಹ ಪತ್ರ ಬರೆಯದಂತೆ ಶಾಸಕರಿಗೆ ತಾಕೀತು ಮಾಡಿದ ಘಟನೆಯೂ ನಡೆದಿದೆ. 

ಇದಕ್ಕೆ ಪತ್ರ ಬರೆದ ಶಾಸಕರಾದ ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್‌. ಪಾಟೀಲ್‌ ಅವರು, ಸಭೆಯ ಕ್ಷಮೆಯನ್ನು ಕೋರಿದ್ದು, ತಮ್ಮ ಅಳಲು ತೋಡಿಕೊಳ್ಳುವ ಸದುದ್ದೇಶದಿಂದಷ್ಟೇ ಪತ್ರ ಬರೆದಿದ್ದೆವು.  ಆದರೆ, ಪಿತೂರಿಕಾರರು ನಕಲಿ ಪತ್ರವೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿ ವಿಷಯ ದೊಡ್ಡದಾಗುವಂತೆ ಮಾಡಿದ್ದಾರೆ. ವಿಷಯ ಇಂತಹ ತಿರುವು ತೆಗೆದುಕೊಳ್ಳುತ್ತದೆ ಎಂಬ ಕಲ್ಪನೆಯಿರಲಿಲ್ಲ ಎಂದು ಸಮಜಾಯಿಷಿಯನ್ನು ನೀಡಿದರು ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ಶಿವಲಿಂಗೇಗೌಡ, ಬಿ.ಆರ್‌. ಪಾಟೀಲ್‌, ವೀರೇಂದ್ರ (ಪಪ್ಪಿ), ವಿನಯ ಕುಲಕರ್ಣಿ ಹಾಗೂ ಶರತ್‌ ಬಚ್ಚೇಗೌಡ ಮೊದಲಾದ ಶಾಸಕರು ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಲ ಇಲಾಖೆಯ ಸಚಿವರ ನಡವಳಿಕೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more