ಬಿಜೆಪಿ ವಿರುದ್ಧ ಕಾಂಗ್ರೆಸ್‌ ಅಸ್ಮಿತೆ ಉಳಿಸಲು ಪ್ರಾದೇಶಿಕ ಅಸ್ತ್ರ ಬಳಸಿದ ಸಿಎಂ ಸಿದ್ದರಾಮಯ್ಯ!

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಅಸ್ಮಿತೆ ಉಳಿಸಲು ಪ್ರಾದೇಶಿಕ ಅಸ್ತ್ರ ಬಳಸಿದ ಸಿಎಂ ಸಿದ್ದರಾಮಯ್ಯ!

Published : Feb 08, 2024, 01:24 PM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಷ್ಟ್ರೀಯತೆಯೇ ಅಸ್ತ್ರವಾದ್ರೆ, ಸಿಎಂ ಸಿದ್ದರಾಮಯ್ಯ ಜಂತರ್ ಮಂತರ್'ನಲ್ಲಿ ಮೋದಿ ವಿರುದ್ಧ ಪ್ರಾದೇಶಿಕತೆಯ ಅಸ್ತ್ರ ಪ್ರಯೋಗಿಸಿದರು.

ಶಿವಮೊಗ್ಗ (ಫೆ.08): ಮೋದಿ ಸರ್ಕಾರದ ವಿರುದ್ಧ ದೆಹಲಿಯಲ್ಲಿ ನಡೆಯಿತು ಕಾಂಗ್ರೆಸ್ ಸರ್ಕಾರದ ಮಹಾ ದಂಡಯಾತ್ರೆ.. ಜಂತರ್ ಮಂತರ್'ನಲ್ಲಿ ಸಿಡಿಯಿತು ಪ್ರಾದೇಶಿಕತೆ ಅಸ್ಮಿತೆಯ ಅಸ್ತ್ರ.. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಷ್ಟ್ರೀಯತೆಯೇ ಅಸ್ತ್ರವಾದ್ರೆ, ಮೋದಿ ವಿರುದ್ಧ ಪ್ರಾದೇಶಿಕತೆಯ ಅಸ್ತ್ರ ಪ್ರಯೋಗಿಸಿದರು ಸಿಎಂ ಸಿದ್ದರಾಮಯ್ಯ. ಕನ್ನಡಿಗರ ಬೆವರಿನ ಹಣ ಉತ್ತರ ಪ್ರದೇಶಕ್ಕೆ ಹೋಗ್ತಿದೆ ಅಂತ ಸಿದ್ದು ಒತ್ತಿ ಒತ್ತಿ ಹೇಳಿದ್ದೇಕೆ..? ಲೋಕಸಭಾ ಚುನಾವಣೆಗೂ ಮೊದ್ಲು ಪ್ರಾದೇಶಿಕ ಅಸ್ಮಿತೆಯನ್ನು ಬಡಿದೆಬ್ಬಿಸುವ ಪ್ರಯತ್ನ ನಡೆಸಿದರೇಕೆ ಸಿದ್ದು.? ಲೆಕ್ಕರಾಮಯ್ಯನ ಅಸ್ಮಿತೆ ಅಸ್ತ್ರದ ಹಿಂದಿರೋ ರೋಚಕ ಲೆಕ್ಕಾಚಾರವೇನು ಇಲ್ಲಿದೆ ನೋಡಿ..

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಾದೇಶಿಕತೆಯ ಅಸ್ತ್ರವನ್ನ ಸಿದ್ದರಾಮಯ್ಯ ಝಳಪಿಸುತ್ತಿದ್ದಾರೆ. ರಾಷ್ಟ್ರೀಯತೆ Vs ಪ್ರಾದೇಶಿಕತೆಯ ಸಮರಕ್ಕೆ ಮುನ್ನುಡಿ ಬರೆದಿದ್ದಾರೆ. ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್'ಗೆ ಸಿಕ್ಕಿರೋದು ಅಂತಿಂಥಾ ಅಸ್ತ್ರವಲ್ಲ.. ಅದು ಅಸ್ಮಿತೆಯ ಅಸ್ತ್ರ, ಪ್ರಾದೇಶಿಕತೆಯ ಅಸ್ತ್ರ. ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅಸ್ಮಿತೆಯ ರಣಕಹಳೆ ಮೊಳಗಿಸಿ ಬಿಟ್ಟಿದ್ದಾರೆ. ರಾಷ್ಟ್ರೀಯತೆ Vs ಪ್ರಾದೇಶಿಕತೆಯ ಸಮರಕ್ಕೆ ಮುನ್ನುಡಿ ಬರೆದಿದ್ದಾರೆ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ಅಂತ ಲೋಕಸಭೆಯಲ್ಲೇ ಹೇಳಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಇದಕ್ಕೆ ಸಿದ್ದರಾಮಯ್ಯನವರು ಕೊಟ್ಟ ಉತ್ತರ ಹೇಗಿತ್ತು ನೋಡಿ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗ್ತಿದೆ ಅನ್ನೋದು ಕಾಂಗ್ರೆಸ್ ಆರೋಪ. ಇದು ಹಸಿ ಹಸಿ ಸುಳ್ಳು ಅಂತ ಲೋಕಸಭೆಯಲ್ಲೇ ಹೇಳಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ಇದಕ್ಕೆ ಜಂತರ್ ಮಂತರ್'ನಲ್ಲಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯ ರಾಷ್ಟ್ರೀಯತೆಯ ವಿರುದ್ಧ ಪ್ರಾದೇಶಿಕತೆಯ ಅಸ್ಮಿತೆಯನ್ನು ಸಿದ್ದರಾಮಯ್ಯ ಬಡಿದೆಬ್ಬಿಸಿದ್ದಾರೆ. ಹಾಗಾದ್ರೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯತೆ ಗೆಲ್ಲುತ್ತಾ, ಪ್ರಾದೇಶಿಕತೆ ಗೆಲ್ಲುತ್ತಾ..? ಕಾದು ನೋಡೋಣ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?