ಮುಡಾ ಕಂಟಕದಿಂದ ಪಾರಾಗಲು ಸ್ವಾಮೀಜಿಗಳ ಮೊರೆ ಹೋದ ಸಿಎಂ ಸಿದ್ದರಾಮಯ್ಯ!

ಮುಡಾ ಕಂಟಕದಿಂದ ಪಾರಾಗಲು ಸ್ವಾಮೀಜಿಗಳ ಮೊರೆ ಹೋದ ಸಿಎಂ ಸಿದ್ದರಾಮಯ್ಯ!

Published : Aug 27, 2024, 03:33 PM IST

ಸಿಂಹಾಸನದ ಸುತ್ತ ಸ್ವಾಮೀಜಿಗಳ ಕೋಟೆ ಕಟ್ಟಿ ನಿಂತಿರುವ ಸಿದ್ದರಾಮಯ್ಯ, ಮುಡಾ ಸಂಕಷ್ಟದ ಹೊತ್ತಲ್ಲಿ ಕಾವಿ ಮಂತ್ರತಂತ್ರ ಹೆಣೆದಿದ್ದಾರೆ. ರಾಜಕೀಯ ಇತಿಹಾಸದಲ್ಲಿ ಸ್ವಾಮೀಜಿಗಳ ಪಾತ್ರ ಮತ್ತು ಸಿದ್ದರಾಮಯ್ಯನವರ ಈ ನಡೆ ಏನನ್ನು ಸೂಚಿಸುತ್ತದೆ ಎಂಬುದನ್ನು ಪರಿಶೀಲಿಸಲಾಗಿದೆ.

ಮಠ-ಮಂದಿರಗಳಂದರೆ ಮಾರುದ್ದ ದೂರ ನಿಲ್ಲುವ ಸಿದ್ದರಾಮಯ್ಯನವರಿಂದ ಸಿಂಹಾಸನ ರಕ್ಷಣೆಗಾಗಿ ಸ್ವಾಮೀಜಿ ವ್ಯೂಹದ ಮೊರೆ ಹೋಗಿದ್ದಾರೆ. ಸಿದ್ದರಾಮಯ್ಯ ತಮ್ಮ ಸಿಂಹಾಸನದ ಸುತ್ತ 10 ಸ್ವಾಮೀಜಿಗಳು ಕೋಟೆ ಕಟ್ಟಿ ನಿಂತಿದ್ದಾರೆ. ಮುಡಾ ಸಂಕಷ್ಟದ ಹೊತ್ತಲ್ಲಿ ಮುಖ್ಯಮಂತ್ರಿಗಳಿಗೆ ಸ್ವಾಮೀಜಿಗಳ ದಶರಥ ಬಲ ಸಿಕ್ಕಿದೆ. ಇದಾದ ನಂತರ, ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೇ ಎಂದು ಹೇಳುತ್ತಾ, ಕುಟಿಲ ಕಾರಸ್ಥಾನದ ಕಥೆ ಹೇಳಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿರುವ ಹೊತ್ತಲ್ಲಿ ಸಿದ್ದರಾಮಯ್ಯ ಕಾವಿ ಮಂತ್ರತ ತಂತ್ರ ಹೆಣೆದಿದ್ದಾರೆ. 

ಅವತ್ತು ಸದಾನಂದ ಗೌಡ ಮತ್ತು ಯಡಿಯೂರಪ್ಪ ಅವರೂ ಕಾವಿ ಮೊರೆ ಹೋಗಿದ್ದರು. ಈಗ ಸಿದ್ದರಾಮಯ್ಯ ಕೂಡ ತಮ್ಮ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಎಂದಾಗ ಕಾವಿ ಮೊರೆ ಹೋಗಿದ್ದಾರೆ. ಈ ಸ್ವಾಮೀಜಿಗಳು ರಾಜಕೀಯ ಅಖಾಡಕ್ಕಿಳಿಯೋದು ಹೊಸನೇತಲ್ಲ. ರಾಜ್ಯ ರಾಜಕಾರಣದಲ್ಲಿ ಇದಕ್ಕೆ ದೊಡ್ಡ ಇತಿಹಾಸವೇ ಇದೆ. ಚರಿತ್ರೆಯ ಪುಟದಿಂದ ಎದ್ದು ಬಂದ ಸನ್ಯಾಸಿ ರಾಜಕಾರಣದ ರೋಚಕ ಕತೆಗಳು ಇಲ್ಲಿವೆ ನೋಡಿ. 

ರಾಜ್ಯದಲ್ಲಿ ಯಾವುದೇ ಸಮುದಾಯದ ವ್ಯಕ್ತಿ ಮುಖ್ಯಮಂತ್ರಿ ಆಗಲು, ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವಾಗ ಕುರ್ಚಿ ಅಲುಗಾಡಿದಾಗ್ಲೆಲ್ಲಾ ಮುಖ್ಯಮಂತ್ರಿಗಳು ಸ್ವಾಮೀಜಿ ವ್ಯೂಹ ಹೆಣೆದು ಸಡ್ಡು ಹೊಡೆಯೋದು ರಾಜ್ಯ ರಾಜಕಾರಣದಲ್ಲಿ ಹೊಸತೇನಲ್ಲ. ರಾಜಕೀಯ ಶಕ್ತಿಪ್ರದರ್ಶನದಲ್ಲಿ ಸಿದ್ದರಾಮಯ್ಯ ಭರ್ಜರಿ ಪಟ್ಟುಗಳನ್ನು ಹಾಕುತ್ತಿದ್ದಾರೆ. ಆದರೆ, ಮುಡಾ ಪ್ರಕರಣವನ್ನು ರಾಜಕೀಯ ಅಸ್ತ್ರದಿಂದಲೇ ಗೆಲ್ಲಲು ಸಾಧ್ಯವಿಲ್ಲ. ಕಾರಣ, ಅದೀಗ ಕಾನೂನಿನ ಕಟ್ಟಳೆಯೊಳಗಿರೋ ಪ್ರಕರಣ. ಹೀಗಾಗಿ ಆಗಸ್ಟ್ 29ರ ಆ ನಿರ್ಣಾಯಕ ದಿನದ ಮೇಲೆ ಎಲ್ಲರ ಗಮನ ನೆಟ್ಟಿದೆ. ಸಿಂಹಾಸನವನ್ನು ಉಳಿಸಿಕೊಳ್ಳಲು ರಾಜಕೀಯವಾಗಿ ಏನೆಲ್ಲಾ ಪಟ್ಟುಗಳನ್ನು ಹಾಕಬೇಕೋ, ಯಾವೆಲ್ಲಾ ಅಸ್ತ್ರಗಳನ್ನು ಪ್ರಯೋಗಿಸಬೇಕೋ ಎಂಬ ಗೊಂದಲದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more