ಮುಡಾ ಕಂಟಕದಿಂದ ಪಾರಾಗಲು ಸ್ವಾಮೀಜಿಗಳ ಮೊರೆ ಹೋದ ಸಿಎಂ ಸಿದ್ದರಾಮಯ್ಯ!

ಮುಡಾ ಕಂಟಕದಿಂದ ಪಾರಾಗಲು ಸ್ವಾಮೀಜಿಗಳ ಮೊರೆ ಹೋದ ಸಿಎಂ ಸಿದ್ದರಾಮಯ್ಯ!

Published : Aug 27, 2024, 03:33 PM IST

ಸಿಂಹಾಸನದ ಸುತ್ತ ಸ್ವಾಮೀಜಿಗಳ ಕೋಟೆ ಕಟ್ಟಿ ನಿಂತಿರುವ ಸಿದ್ದರಾಮಯ್ಯ, ಮುಡಾ ಸಂಕಷ್ಟದ ಹೊತ್ತಲ್ಲಿ ಕಾವಿ ಮಂತ್ರತಂತ್ರ ಹೆಣೆದಿದ್ದಾರೆ. ರಾಜಕೀಯ ಇತಿಹಾಸದಲ್ಲಿ ಸ್ವಾಮೀಜಿಗಳ ಪಾತ್ರ ಮತ್ತು ಸಿದ್ದರಾಮಯ್ಯನವರ ಈ ನಡೆ ಏನನ್ನು ಸೂಚಿಸುತ್ತದೆ ಎಂಬುದನ್ನು ಪರಿಶೀಲಿಸಲಾಗಿದೆ.

ಮಠ-ಮಂದಿರಗಳಂದರೆ ಮಾರುದ್ದ ದೂರ ನಿಲ್ಲುವ ಸಿದ್ದರಾಮಯ್ಯನವರಿಂದ ಸಿಂಹಾಸನ ರಕ್ಷಣೆಗಾಗಿ ಸ್ವಾಮೀಜಿ ವ್ಯೂಹದ ಮೊರೆ ಹೋಗಿದ್ದಾರೆ. ಸಿದ್ದರಾಮಯ್ಯ ತಮ್ಮ ಸಿಂಹಾಸನದ ಸುತ್ತ 10 ಸ್ವಾಮೀಜಿಗಳು ಕೋಟೆ ಕಟ್ಟಿ ನಿಂತಿದ್ದಾರೆ. ಮುಡಾ ಸಂಕಷ್ಟದ ಹೊತ್ತಲ್ಲಿ ಮುಖ್ಯಮಂತ್ರಿಗಳಿಗೆ ಸ್ವಾಮೀಜಿಗಳ ದಶರಥ ಬಲ ಸಿಕ್ಕಿದೆ. ಇದಾದ ನಂತರ, ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೇ ಎಂದು ಹೇಳುತ್ತಾ, ಕುಟಿಲ ಕಾರಸ್ಥಾನದ ಕಥೆ ಹೇಳಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿರುವ ಹೊತ್ತಲ್ಲಿ ಸಿದ್ದರಾಮಯ್ಯ ಕಾವಿ ಮಂತ್ರತ ತಂತ್ರ ಹೆಣೆದಿದ್ದಾರೆ. 

ಅವತ್ತು ಸದಾನಂದ ಗೌಡ ಮತ್ತು ಯಡಿಯೂರಪ್ಪ ಅವರೂ ಕಾವಿ ಮೊರೆ ಹೋಗಿದ್ದರು. ಈಗ ಸಿದ್ದರಾಮಯ್ಯ ಕೂಡ ತಮ್ಮ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಎಂದಾಗ ಕಾವಿ ಮೊರೆ ಹೋಗಿದ್ದಾರೆ. ಈ ಸ್ವಾಮೀಜಿಗಳು ರಾಜಕೀಯ ಅಖಾಡಕ್ಕಿಳಿಯೋದು ಹೊಸನೇತಲ್ಲ. ರಾಜ್ಯ ರಾಜಕಾರಣದಲ್ಲಿ ಇದಕ್ಕೆ ದೊಡ್ಡ ಇತಿಹಾಸವೇ ಇದೆ. ಚರಿತ್ರೆಯ ಪುಟದಿಂದ ಎದ್ದು ಬಂದ ಸನ್ಯಾಸಿ ರಾಜಕಾರಣದ ರೋಚಕ ಕತೆಗಳು ಇಲ್ಲಿವೆ ನೋಡಿ. 

ರಾಜ್ಯದಲ್ಲಿ ಯಾವುದೇ ಸಮುದಾಯದ ವ್ಯಕ್ತಿ ಮುಖ್ಯಮಂತ್ರಿ ಆಗಲು, ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವಾಗ ಕುರ್ಚಿ ಅಲುಗಾಡಿದಾಗ್ಲೆಲ್ಲಾ ಮುಖ್ಯಮಂತ್ರಿಗಳು ಸ್ವಾಮೀಜಿ ವ್ಯೂಹ ಹೆಣೆದು ಸಡ್ಡು ಹೊಡೆಯೋದು ರಾಜ್ಯ ರಾಜಕಾರಣದಲ್ಲಿ ಹೊಸತೇನಲ್ಲ. ರಾಜಕೀಯ ಶಕ್ತಿಪ್ರದರ್ಶನದಲ್ಲಿ ಸಿದ್ದರಾಮಯ್ಯ ಭರ್ಜರಿ ಪಟ್ಟುಗಳನ್ನು ಹಾಕುತ್ತಿದ್ದಾರೆ. ಆದರೆ, ಮುಡಾ ಪ್ರಕರಣವನ್ನು ರಾಜಕೀಯ ಅಸ್ತ್ರದಿಂದಲೇ ಗೆಲ್ಲಲು ಸಾಧ್ಯವಿಲ್ಲ. ಕಾರಣ, ಅದೀಗ ಕಾನೂನಿನ ಕಟ್ಟಳೆಯೊಳಗಿರೋ ಪ್ರಕರಣ. ಹೀಗಾಗಿ ಆಗಸ್ಟ್ 29ರ ಆ ನಿರ್ಣಾಯಕ ದಿನದ ಮೇಲೆ ಎಲ್ಲರ ಗಮನ ನೆಟ್ಟಿದೆ. ಸಿಂಹಾಸನವನ್ನು ಉಳಿಸಿಕೊಳ್ಳಲು ರಾಜಕೀಯವಾಗಿ ಏನೆಲ್ಲಾ ಪಟ್ಟುಗಳನ್ನು ಹಾಕಬೇಕೋ, ಯಾವೆಲ್ಲಾ ಅಸ್ತ್ರಗಳನ್ನು ಪ್ರಯೋಗಿಸಬೇಕೋ ಎಂಬ ಗೊಂದಲದಲ್ಲಿ ಸಿಎಂ ಸಿದ್ದರಾಮಯ್ಯ ಇದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more