ಖಾತೆ ಬದಲಾವಣೆ ಮಾಡಿದ್ದಕ್ಕೆ ಅಸಮಾಧಾನ ಸ್ಫೋಟ: ಇದಕ್ಕೆ ಹೊಸ ಸೂತ್ರ ಹೆಣೆದ ಸಿಎಂ

Jan 21, 2021, 2:46 PM IST

ತುಮಕೂರು, (ಜ.21): 7 ನೂತನ ಸಚಿರುಗಳಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಇಂದು (ಗುರುವಾರ) ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಜೊತೆಗೆ ಸಿಎಂ ಬಿಎಸ್‌ವೈ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದು, ಅಸಮಾಧಾನ ಸ್ಫೋಟಗೊಂಡಿದೆ.

ಅಸಮಧಾನಗೊಂಡಿರುವ ರೇಣುಕಾಚಾರ್ಯಗೆ ಬಂಪರ್ ಗಿಫ್ಟ್..!

ಹೌದು...ಒಂದು ಕಡೆ ಸಚಿವ ಸ್ಥಾನ ಸಿಗದ ಕೆಲ ಶಾಸಕರು ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಿದ್ದರೆ, ಇನ್ನೊಂದೆಡೆ ಖಾತೆ ಬದಲಾವಣೆ ಮಾಡಿದ್ದಕ್ಕೆ ಸಚಿವರುಗಳು ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಬಿಎಸ್‌ವೈ ಪ್ರತಿಕ್ರಿಯೆ ಕೊಟ್ಟಿದ್ದಾರೆ.