'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

Published : Aug 11, 2023, 01:40 PM IST

ಡಿಸಿಎಂ ಕೊರಳಿಗೆ ಸುತ್ತಿಕೊಳ್ಳುತ್ತಾ ಕಮಿಷನ್ ಉರುಳು..?
ಬಾಣಲೆಯಿಂದಬೆಂಕಿಗೆ ಬಿದ್ದಿದ್ದೇವೆ ಅಂದಿದ್ದೇಕೆ ಕೆಂಪಣ್ಣ..!?
ಪೇಸಿಎಂ Vs ಪೇಸಿಎಸ್,ಕಮಿಷನ್ ಕಾಳಗ..ಏನಿದರ ಮರ್ಮ..?
 

ಅದು ಕಳೆದ ಬಿಜೆಪಿ(BJP) ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ತೂಫಾನ್. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ. ಅದೇ ತೂಫಾನ್, ಅದೇ ಸುನಾಮಿಯೀಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸಿದೆ. ಸಿದ್ದು ಸರ್ಕಾರಕ್ಕೆ ಕಮಿಷನ್(Commission) ಕಂಟಕ ಶುರುವಾಗಿದೆ. ಅವತ್ತು 40% ಅಸ್ತ್ರ, ಇವತ್ತು 15% ರಿವರ್ಸ್ ಅಸ್ತ್ರ. ಕಮಿಷನ್ ಅಂದಾಕ್ಷಣ ಕಣ್ಮುಂದೆ ಬರೋದು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದ್ದು ಮಾಡಿದ್ದ 40% ಕಮಿಷನ್ ಮ್ಯಾಟರ್. ಅವತ್ತು ಇಡೀ ಕೇಸರಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆದದ್ದು ಇದೇ 40% ಆರೋಪ. ರಾಜ್ಯ ಗುತ್ತಿಗೆದಾರರ ಸಂಘ ಸ್ಫೋಟಿಸಿದ್ದ 40% ಬಾಂಬ್, ಬಿಜೆಪಿ ಸರ್ಕಾರವನ್ನು ಪೀಸ್ ಪೀಸ್ ಮಾಡಿ ಬಿಟ್ಟಿತ್ತು. ಅದೇ ಗುತ್ತಿಗೆದಾರರೀಗ ಕಾಂಗ್ರೆಸ್(Congress) ಸರ್ಕಾರದ ಮೇಲೆ ಮುಗಿ ಬಿದ್ದಿದ್ದಾರೆ. ಅದ್ರಲ್ಲೂ ಬಿಬಿಎಂಪಿ (BBMP)ವ್ಯಾಪ್ತಿಯ ಕಾಂಟ್ರಾಕ್ಟರ್‌ಗಳು ಕೈ ಸರ್ಕಾರದ ವಿರುದ್ಧ ದೊಡ್ಡ ಸಮರವನ್ನೇ ಸಾರಿದ್ದಾರೆ. ಕಾರಣ, ಕಮಿಷನ್ ರಹಸ್ಯ. ಕಳೆದ 2 ವರ್ಷಗಳಲ್ಲಿ ಆಗಿರೋ ಕಾಮಗಾರಿಗಳ ಬಿಲ್ ಅನ್ನು ಬಿಬಿಎಂಪಿ ತಡೆ ಹಿಡಿದದ್ದೇ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣ. ಕೆಲ ಕಾಮಗಾರಿಗಳ ಮೇಲೆ ಅನುಮಾನವಿದ್ದು, ಕಾಮಗಾರಿ ನಡೆಸದೇನೇ ಬೋಗಸ್ ಬಿಲ್ ಸೃಷ್ಟಿಸಲಾಗಿದೆ ಅನ್ನೋ ದೂರುಗಳು ಸರ್ಕಾರಕ್ಕೆ ಬಂದಿವೆಯಂತೆ. ಹೀಗಾಗಿ ಕಾಮಗಾರಿಗಳ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನ ಬೇಟೆಯಾಡಿತ್ತು ನಿಯತ್ತಿನ ಶ್ವಾನ: ಬರ್ಬರ ಕೊಲೆ ಕೇಸ್ ಬೇಧಿಸಿದ ಲೇಡಿ ಸಿಂಗಂ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!