'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

'ಕೈ' ಸನ್ನೆಯಲ್ಲೇ ಕಮಿಷನ್..ಏನಿದರ ಮರ್ಮ..? ಗುತ್ತಿಗೆದಾರರ ಬಲೆಯಲ್ಲಿ ಡಿಸಿಎಂ !

Published : Aug 11, 2023, 01:40 PM IST

ಡಿಸಿಎಂ ಕೊರಳಿಗೆ ಸುತ್ತಿಕೊಳ್ಳುತ್ತಾ ಕಮಿಷನ್ ಉರುಳು..?
ಬಾಣಲೆಯಿಂದಬೆಂಕಿಗೆ ಬಿದ್ದಿದ್ದೇವೆ ಅಂದಿದ್ದೇಕೆ ಕೆಂಪಣ್ಣ..!?
ಪೇಸಿಎಂ Vs ಪೇಸಿಎಸ್,ಕಮಿಷನ್ ಕಾಳಗ..ಏನಿದರ ಮರ್ಮ..?
 

ಅದು ಕಳೆದ ಬಿಜೆಪಿ(BJP) ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ತೂಫಾನ್. ಅದು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮುನ್ನುಡಿ ಬರೆದಿದ್ದ ಸುನಾಮಿ. ಅದೇ ತೂಫಾನ್, ಅದೇ ಸುನಾಮಿಯೀಗ ಕಾಂಗ್ರೆಸ್ ಸರ್ಕಾರದ ಮೇಲೆ ಅಪ್ಪಳಿಸಿದೆ. ಸಿದ್ದು ಸರ್ಕಾರಕ್ಕೆ ಕಮಿಷನ್(Commission) ಕಂಟಕ ಶುರುವಾಗಿದೆ. ಅವತ್ತು 40% ಅಸ್ತ್ರ, ಇವತ್ತು 15% ರಿವರ್ಸ್ ಅಸ್ತ್ರ. ಕಮಿಷನ್ ಅಂದಾಕ್ಷಣ ಕಣ್ಮುಂದೆ ಬರೋದು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದ್ದು ಮಾಡಿದ್ದ 40% ಕಮಿಷನ್ ಮ್ಯಾಟರ್. ಅವತ್ತು ಇಡೀ ಕೇಸರಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆದದ್ದು ಇದೇ 40% ಆರೋಪ. ರಾಜ್ಯ ಗುತ್ತಿಗೆದಾರರ ಸಂಘ ಸ್ಫೋಟಿಸಿದ್ದ 40% ಬಾಂಬ್, ಬಿಜೆಪಿ ಸರ್ಕಾರವನ್ನು ಪೀಸ್ ಪೀಸ್ ಮಾಡಿ ಬಿಟ್ಟಿತ್ತು. ಅದೇ ಗುತ್ತಿಗೆದಾರರೀಗ ಕಾಂಗ್ರೆಸ್(Congress) ಸರ್ಕಾರದ ಮೇಲೆ ಮುಗಿ ಬಿದ್ದಿದ್ದಾರೆ. ಅದ್ರಲ್ಲೂ ಬಿಬಿಎಂಪಿ (BBMP)ವ್ಯಾಪ್ತಿಯ ಕಾಂಟ್ರಾಕ್ಟರ್‌ಗಳು ಕೈ ಸರ್ಕಾರದ ವಿರುದ್ಧ ದೊಡ್ಡ ಸಮರವನ್ನೇ ಸಾರಿದ್ದಾರೆ. ಕಾರಣ, ಕಮಿಷನ್ ರಹಸ್ಯ. ಕಳೆದ 2 ವರ್ಷಗಳಲ್ಲಿ ಆಗಿರೋ ಕಾಮಗಾರಿಗಳ ಬಿಲ್ ಅನ್ನು ಬಿಬಿಎಂಪಿ ತಡೆ ಹಿಡಿದದ್ದೇ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣ. ಕೆಲ ಕಾಮಗಾರಿಗಳ ಮೇಲೆ ಅನುಮಾನವಿದ್ದು, ಕಾಮಗಾರಿ ನಡೆಸದೇನೇ ಬೋಗಸ್ ಬಿಲ್ ಸೃಷ್ಟಿಸಲಾಗಿದೆ ಅನ್ನೋ ದೂರುಗಳು ಸರ್ಕಾರಕ್ಕೆ ಬಂದಿವೆಯಂತೆ. ಹೀಗಾಗಿ ಕಾಮಗಾರಿಗಳ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೊಲೆಗಾರನನ್ನ ಬೇಟೆಯಾಡಿತ್ತು ನಿಯತ್ತಿನ ಶ್ವಾನ: ಬರ್ಬರ ಕೊಲೆ ಕೇಸ್ ಬೇಧಿಸಿದ ಲೇಡಿ ಸಿಂಗಂ..!

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!